ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿತರ ವಿಶೇಷ ಚಿಕಿತ್ಸೆಗಾಗಿ ಐಸಿಯು ವಾರ್ಡನಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಜೊತೆಗೆ ವೆಂಟಿಲೇಟರ್ ಕೂಡ ಅತ್ಯವಶ್ಯವಾಗಿ ಬೇಕು. ಈಗಾಗಲೇ ಸರ್ಕಾರ ನಿಗದಿಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಇನ್ಮುಂದೆ ಕೊರೊನಾ ಸೋಂಕಿತರಿಗೆ‌ ಚಿಕಿತ್ಸೆ ನೀಡಲು ಅನುನತಿ ನೀಡಲಾಗಿದೆ.
ಸೋಂಕಿತರ ಬಗ್ಗೆ ಖಾಸಗಿ ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕಿದೆ. ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳು ನೋಂದಣಿಯಾಗಿದ್ದು, ಆ ಆಸ್ಪತ್ರೆಗಳನ್ನೆ ಕೋವಿಡ್ 19 ಚಿಕಿತ್ಸೆಗೆ ನಿಯೋಜಿಸಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಪಾಲಿಸಬೇಕಾದ ನಿಯಮಗಳು


1) ಸೋಂಕಿತರಿಗೆ ಚಿಕಿತ್ಸೆಗಾಗಿ‌ ಸ್ಥಳೀಯ ಜಿಲ್ಲಾಧಿಕಾರಿ, ಬಿಬಿಎಂ ಕಮೀಷನರ್, ನಿರ್ದೇಶಕರು, ಡಿಎಚ್ಓ, ಡಿಎಲ್ಓ ಇತರರಿಂದ ಶಿಫಾರಸ್ಸು ಪತ್ರ ಪಡೆದವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

2) ಸೋಂಕಿತ ದಾಖಲಾದ ಕೂಡಲೇ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ತಕ್ಷಣ ಚಿಕಿತ್ಸೆ ಆರಂಭಿಸಬೇಕು.

3) ಸರ್ಕಾರದ ಚಿಕಿತ್ಸಾ ನಿಯಮಗಳನ್ನು ಕಾಲಕ್ಕೆ ತಕ್ಕಂತೆ ಪಾಲನೆ ಮಾಡಬೇಕು.

4) ಖಾಸಗಿ ಆಸ್ಪತ್ರೆಗಳಿಗೆ ನಿಗದಿ ಪಡಿಸಿದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಜೊತೆಗೆ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಮೊದಲ ಸಾವು : ಕೈ ಸೇರದ ಪಾಸಿಟಿವ್ ವರದಿ

ದೇಶದಲ್ಲೇ ಮೊದಲಬಾರಿಗೆ ಕೋರೊನಾ ಸಂಕಿನಿಂದ ಮೃತಪಟ್ಟ ಮೊಹಮದ್ದ ಹುಸೇನ್ ಸಿದ್ದಿಕ (76) ಅವರ ಕೊವಿಡ್ ಪಾಸಿಟಿವ್ ವರದಿ ಇನ್ನೂ ಅವರ ಕುಟುಂಬದ ಕೈಗೆ ತಲುಪಿಲ್ಲ.

ರಾಜ್ಯದಲ್ಲಿಂದು 445 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 445 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11,005 ಕ್ಕೆ ಏರಿಕೆಯಾದಂತಾಗಿದೆ.

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…