ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿತರ ವಿಶೇಷ ಚಿಕಿತ್ಸೆಗಾಗಿ ಐಸಿಯು ವಾರ್ಡನಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಜೊತೆಗೆ ವೆಂಟಿಲೇಟರ್ ಕೂಡ ಅತ್ಯವಶ್ಯವಾಗಿ ಬೇಕು. ಈಗಾಗಲೇ ಸರ್ಕಾರ ನಿಗದಿಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಇನ್ಮುಂದೆ ಕೊರೊನಾ ಸೋಂಕಿತರಿಗೆ‌ ಚಿಕಿತ್ಸೆ ನೀಡಲು ಅನುನತಿ ನೀಡಲಾಗಿದೆ.
ಸೋಂಕಿತರ ಬಗ್ಗೆ ಖಾಸಗಿ ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕಿದೆ. ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳು ನೋಂದಣಿಯಾಗಿದ್ದು, ಆ ಆಸ್ಪತ್ರೆಗಳನ್ನೆ ಕೋವಿಡ್ 19 ಚಿಕಿತ್ಸೆಗೆ ನಿಯೋಜಿಸಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಪಾಲಿಸಬೇಕಾದ ನಿಯಮಗಳು


1) ಸೋಂಕಿತರಿಗೆ ಚಿಕಿತ್ಸೆಗಾಗಿ‌ ಸ್ಥಳೀಯ ಜಿಲ್ಲಾಧಿಕಾರಿ, ಬಿಬಿಎಂ ಕಮೀಷನರ್, ನಿರ್ದೇಶಕರು, ಡಿಎಚ್ಓ, ಡಿಎಲ್ಓ ಇತರರಿಂದ ಶಿಫಾರಸ್ಸು ಪತ್ರ ಪಡೆದವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

2) ಸೋಂಕಿತ ದಾಖಲಾದ ಕೂಡಲೇ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ತಕ್ಷಣ ಚಿಕಿತ್ಸೆ ಆರಂಭಿಸಬೇಕು.

3) ಸರ್ಕಾರದ ಚಿಕಿತ್ಸಾ ನಿಯಮಗಳನ್ನು ಕಾಲಕ್ಕೆ ತಕ್ಕಂತೆ ಪಾಲನೆ ಮಾಡಬೇಕು.

4) ಖಾಸಗಿ ಆಸ್ಪತ್ರೆಗಳಿಗೆ ನಿಗದಿ ಪಡಿಸಿದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಜೊತೆಗೆ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.

Leave a Reply

Your email address will not be published. Required fields are marked *

You May Also Like

ಯಶಶ್ವಿನಿ ಯೋಜನೆ ರೈತರಿಗೆ ಮಾಸಿಕ ವೇತನ ಜಾರಿಗೊಳಿಸಿ

ಲಕ್ಷ್ಮೇಶ್ವರ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕರವೇ ಸ್ವಾಭಿಮಾನಿ ಬಣದಿಂದ ಉಪ ತಹಸೀಲ್ದಾರ್ ಮಂಜುನಾಥ ದಾಸಪ್ಪನವರಿಗೆ ಮನವಿ…

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…

ಉಗ್ರರಿಗೆ ಚಿಕಿತ್ಸೆ ನೀಡಲು, ಶಸ್ತ್ರಾಸ್ತ್ರ ಪೂರೈಸುವುದಕ್ಕಾಗಿಯೇ ಈತ ಮಾಡಿದ್ದೇನು?

ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಮೀಸಲಾತಿ ಪಟ್ಟಿ: ಕಾರಜೋಳ ಹೇಳಿಕೆ ಸ್ವಾಗತಿಸಿದ ಇಮ್ಮಡಿ ಶ್ರೀ

ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿಲ್ಲ ಹಾಗೂ ಬಿಡುವುದಿಲ್ಲ…