ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿತರ ವಿಶೇಷ ಚಿಕಿತ್ಸೆಗಾಗಿ ಐಸಿಯು ವಾರ್ಡನಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಜೊತೆಗೆ ವೆಂಟಿಲೇಟರ್ ಕೂಡ ಅತ್ಯವಶ್ಯವಾಗಿ ಬೇಕು. ಈಗಾಗಲೇ ಸರ್ಕಾರ ನಿಗದಿಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಇನ್ಮುಂದೆ ಕೊರೊನಾ ಸೋಂಕಿತರಿಗೆ‌ ಚಿಕಿತ್ಸೆ ನೀಡಲು ಅನುನತಿ ನೀಡಲಾಗಿದೆ.
ಸೋಂಕಿತರ ಬಗ್ಗೆ ಖಾಸಗಿ ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕಿದೆ. ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳು ನೋಂದಣಿಯಾಗಿದ್ದು, ಆ ಆಸ್ಪತ್ರೆಗಳನ್ನೆ ಕೋವಿಡ್ 19 ಚಿಕಿತ್ಸೆಗೆ ನಿಯೋಜಿಸಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಪಾಲಿಸಬೇಕಾದ ನಿಯಮಗಳು


1) ಸೋಂಕಿತರಿಗೆ ಚಿಕಿತ್ಸೆಗಾಗಿ‌ ಸ್ಥಳೀಯ ಜಿಲ್ಲಾಧಿಕಾರಿ, ಬಿಬಿಎಂ ಕಮೀಷನರ್, ನಿರ್ದೇಶಕರು, ಡಿಎಚ್ಓ, ಡಿಎಲ್ಓ ಇತರರಿಂದ ಶಿಫಾರಸ್ಸು ಪತ್ರ ಪಡೆದವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

2) ಸೋಂಕಿತ ದಾಖಲಾದ ಕೂಡಲೇ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ತಕ್ಷಣ ಚಿಕಿತ್ಸೆ ಆರಂಭಿಸಬೇಕು.

3) ಸರ್ಕಾರದ ಚಿಕಿತ್ಸಾ ನಿಯಮಗಳನ್ನು ಕಾಲಕ್ಕೆ ತಕ್ಕಂತೆ ಪಾಲನೆ ಮಾಡಬೇಕು.

4) ಖಾಸಗಿ ಆಸ್ಪತ್ರೆಗಳಿಗೆ ನಿಗದಿ ಪಡಿಸಿದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಜೊತೆಗೆ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.

Leave a Reply

Your email address will not be published. Required fields are marked *

You May Also Like

3 ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ

ವದೆಹಲಿ: ದೇಶದ ಕೆಲ ಭಾಗಗಳಲ್ಲಿ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು.

ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿರುವ ಮಹಾಮಾರಿ!

ನವದೆಹಲಿ: ದೇಶದಲ್ಲಿ ಶರವೇಗದಲ್ಲಿ ಹಬ್ಬುತ್ತಿರುವ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಆತಂಕ ಮೂಡಿಸುತ್ತಿದೆ.…

ಹಾವೇರಿ ಜಿಲ್ಲೆಯ ಜನತೆಗೆ ಮೊದಲ ಸಿಹಿ ಸುದ್ದಿ.

40 ವರ್ಷದ ಕರೊನಾ ಸೋಂಕಿತ ವ್ಯಕ್ತಿ ಗುಣಮುಖವಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಹಾವೆರಿ ಜಿಲ್ಲೆಯ ಜನತೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಪಿ-672 ಸೋಂಕಿತ ಗುಣಮುಖವಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಈದ್ ಮಿಲಾದ್, ದಸರಾ ಆಚರಣೆ : ಶಾಂತಿ ಪಾಲನೆ‌ ಸಭೆ

ಕೋವಿಡ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸಿರುವ ಮಾರ್ಗಸೂಚಿಗಳ ಪ್ರಕಾರ ಸಾರ್ವಜನಿಕರು ದಸರಾ ಹಾಗೂ ಈದ್ ಮಿಲಾದ್ ಹಬ್ಬಗಳನ್ನ ಆಚರಿಸಬೇಕು ಎಂದು ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತ್ತನವರ ಹೇಳಿದರು.