ನವದೆಹಲಿ: ಲಡಾಖ್ ನಲ್ಲಿ ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ ಮುಖ್ಯಸ್ಥ, 3 ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸಂಪೂರ್ಣ ಸನ್ನದ್ಧರಾಗಿರಿ ಎಂಬ ಸೂಚನೆ ನೀಡಿದ್ದಾರೆ.

ಸಚಿವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ನಡೆದ ಘರ್ಷಣೆ ಬಗ್ಗೆ ಚರ್ಚಿಸಲಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಸೂಚಿಸಿದ್ದಾರೆ.

ಗಡಿ ರೇಖೆಯ ಬಳಿ ಇರುವ ಸಂದರ್ಭಕ್ಕೆ ಅನುಗುಣವಾಗಿ ಹಿಂದೆಂದೂ ತೆಗೆದುಕೊಂಡಿರದ ಕ್ರಮ ಕೈಗೊಳ್ಳುವುದಕ್ಕೆ ಸಂಪೂರ್ಣವಾಗಿ ಸನ್ನದ್ಧರಾಗಿರಲು ರಕ್ಷಣಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ಗಸ್ತು ತಿರುಗುವ ವೇಳೆ ಅತ್ಯಂತ ಎಚ್ಚರಿಕೆಯಿಂದ ಇರಲು ಹಾಗೂ ಚೀನಾದ ಗಡಿ ಪ್ರದೇಶದಲ್ಲಿ ಹೆಚ್ಚು ಜಾಗರೂಕರಾಗಿರುವಂತೆ ರಕ್ಷಣಾ ಸಚಿವರು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೀದರ್: ಅನಾವಶ್ಯಕ ವಾಹನಗಳೊಂದಿಗೆ ರಸ್ತೆಗಿಳಿದಿರಾ.. ಹುಷಾರ್..!

ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.…

ಸುಳ್ಳು ಹೇಳಿದ್ದು ಭಾರತವೋ ಅಥವಾ ಡೊನಾಲ್ಡ್ ಟ್ರಂಪೋ?

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತಾಡಿದ್ದೇನೆ. ಅವರು ಒಳ್ಳೆಯ ಮನಃಸ್ಥಿತಿಯಲ್ಲಿಲ್ಲ ಎಂದು ಅಮೆರಿಕ…

ಕೊರೊನಾ ಹೋರಾಟದಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ – ಕೇಂದ್ರ ಸರ್ಕಾರ!

ನವದೆಹಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶ ಉತ್ತಮ ಸ್ಥಿತಿಯಲ್ಲಿಯೇ ಹೊರಟಿದೆ. ಆದರೂ ಮರೆಯುವಂತಿಲ್ಲ ಎಂದು ಕೇಂದ್ರ…

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.