ದೆಹಲಿ: ಚೀನಾ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಡುವೆ ಭಾರೀ ಕಂದಕ ಏರ್ಪಟ್ಟಿದೆ. ದೇಶದ 20 ಯೋಧರು ಚೀನಾ ಸೈನಿಕರ ದಾಳಿಗೆ ಬಲಿಯಾಗಿದ್ದಾರೆ.
ಚೀನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದು ವಿಡಿಯೋ ಸಂವಾದ ನಡೆಸಿದರು. ಸಭೆಯಲ್ಲಿ ಕಾಂಗ್ರೆಸ್ ನಾಯಕಿ ನಮ್ಮನ್ನು ಕತ್ತಲಲ್ಲಿ ಇಡಲಾಗಿದೆ ಎಂದರು. ಬಹುತೇಕ ವಿಪಕ್ಷಗಳು, ಎನ್.ಡಿ.ಎ ಮೈತ್ರಿ ಪಕ್ಷಗಳು ಸರ್ಕಾರವನ್ನು ಬೆಂಬಲಿಸಿದವು. ಆದರೆ, ಕಡೆಯಲ್ಲಿ ಮಾತಾಡಿದ ಮೋದಿಯವರು, ಚೀನಾ ಭಾರತದ ಮೇಲೆ ದಾಳಿ ಮಾಡಿಲ್ಲ, ಯಾವುದೇ ಪ್ರದೇಶವನ್ನು ವಶಪಡಿಸಿಕೊಂಡಿಲ್ಲ ಎಂದು ಮೋದಿ ಹೇಳಿದ್ದರು.
ಇದನ್ನು ಖಂಡಿಸಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ನರೇಂದ್ರ ಮೋದಿ ವಾಸ್ತವವಾಗಿ ಸರೆಂಡರ್ (ಶರಣಾಗತ) ಮೋದಿ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ನಲ್ಲಿ Surrender Modi ಬದಲಾಗಿ Surender Modi ಎಂದು ಉಲ್ಲೇಖಿಸಲಾಗಿತ್ತು.
ಮೊದಲೇ ಕಾಲೆಳೆಯಲು ಕಾದು ಕುಳಿತಿದ್ದ ನರೇಂದ್ರ ಮೋದಿ ಅಭಿಮಾನಿಗಳು, ಅನುಯಾಯಿಗಳು ಇದನ್ನೇ ಮುಂದಿಟ್ಟುಕೊಂಡು ಟ್ರೋಲ್ ಮಾಡಿದ್ದಾರೆ. ಅಸಲಿಗೆ ನೀವು ಏನನ್ನು ಬರೆಯಬೇಕೆಂದಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗುರುವಾರ ವಿದ್ಯುತ್ ನಿಲುಗಡೆ

ಗದಗ: 110 ಕೆವ್ಹಿ ಗದಗ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಪರಿವರ್ತಕ-1 ಹಾಗೂ ಪರಿವರ್ತಕ-2 ರ…

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…

ರೈತರ ವಿರುದ್ಧ ನಿಂತಿದೆ “ನಾಗ” ಕಂಪನಿ: ಶ್ರೀ ಹರ್ಷಾನಂದ್ ಜಿ. ಮಹಾರಾಜ್

ರೈತರ ವಿರುದ್ಧ ‘ನಾಗ’ಎಂಬ ಕಂಪನಿ ನಿಂತಿದೆ. ನಾಗ ಎಂದರೆ“ನರೇಂದ್ರ, ಅಮಿತ್‌, ಗೌತಮ್‌, ಅದಾನಿ’ ಹೀಗೆ ಹೇಳಿದ್ದು ಯೋಗ ದರ್ಶನ ಪಾರಮಾರ್ಥಿಕ ಟ್ರಸ್ಟ್‌ ಸಂಸ್ಥಾಪಕ ಶ್ರೀ ಹರ್ಷಾನಂದಜಿ ಮಹಾರಾಜ್‌.

ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ನಿಮ್ಮ ಓಣಿಯಲ್ಲೂ ಕಸ ಹಾಕಿರಬಹುದು ನೋಡಿ…!

ಮುಂಡರಗಿ: ಯಾವುದಕ್ಕೂ ಒಂಚೂರು ನೀವು ನಿಮ್ಮ ಮನೆಯಿಂದ ಹೊರಗೆ ಬಂದು ನೋಡಿ ಬೀಡಿ. ಯಾಕಂದ್ರೆ ನಿಮ್ಮ…