ದೆಹಲಿ: ಚೀನಾ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಡುವೆ ಭಾರೀ ಕಂದಕ ಏರ್ಪಟ್ಟಿದೆ. ದೇಶದ 20 ಯೋಧರು ಚೀನಾ ಸೈನಿಕರ ದಾಳಿಗೆ ಬಲಿಯಾಗಿದ್ದಾರೆ.
ಚೀನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದು ವಿಡಿಯೋ ಸಂವಾದ ನಡೆಸಿದರು. ಸಭೆಯಲ್ಲಿ ಕಾಂಗ್ರೆಸ್ ನಾಯಕಿ ನಮ್ಮನ್ನು ಕತ್ತಲಲ್ಲಿ ಇಡಲಾಗಿದೆ ಎಂದರು. ಬಹುತೇಕ ವಿಪಕ್ಷಗಳು, ಎನ್.ಡಿ.ಎ ಮೈತ್ರಿ ಪಕ್ಷಗಳು ಸರ್ಕಾರವನ್ನು ಬೆಂಬಲಿಸಿದವು. ಆದರೆ, ಕಡೆಯಲ್ಲಿ ಮಾತಾಡಿದ ಮೋದಿಯವರು, ಚೀನಾ ಭಾರತದ ಮೇಲೆ ದಾಳಿ ಮಾಡಿಲ್ಲ, ಯಾವುದೇ ಪ್ರದೇಶವನ್ನು ವಶಪಡಿಸಿಕೊಂಡಿಲ್ಲ ಎಂದು ಮೋದಿ ಹೇಳಿದ್ದರು.
ಇದನ್ನು ಖಂಡಿಸಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ನರೇಂದ್ರ ಮೋದಿ ವಾಸ್ತವವಾಗಿ ಸರೆಂಡರ್ (ಶರಣಾಗತ) ಮೋದಿ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ನಲ್ಲಿ Surrender Modi ಬದಲಾಗಿ Surender Modi ಎಂದು ಉಲ್ಲೇಖಿಸಲಾಗಿತ್ತು.
ಮೊದಲೇ ಕಾಲೆಳೆಯಲು ಕಾದು ಕುಳಿತಿದ್ದ ನರೇಂದ್ರ ಮೋದಿ ಅಭಿಮಾನಿಗಳು, ಅನುಯಾಯಿಗಳು ಇದನ್ನೇ ಮುಂದಿಟ್ಟುಕೊಂಡು ಟ್ರೋಲ್ ಮಾಡಿದ್ದಾರೆ. ಅಸಲಿಗೆ ನೀವು ಏನನ್ನು ಬರೆಯಬೇಕೆಂದಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಾಲೆ ಆರಂಭಕ್ಕೆ ಸಿದ್ದರಾಮಯ್ಯ ವಿರೋಧ

ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ಚಿಂತನೆ ನಡೆಸಿದ್ದು ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.

ವಾಟ್ಸಾಪ್ ಬಳಕೆದಾರರಿಗೆ ಇನ್ಮೂಂದೆ ಹೆಚ್ಚಿನ ಬದ್ರತೆ

ವಾಟ್ಸ್ ಆಪ್ ವೆಬ್ ಮತ್ತು ಡೆಸ್ಕ್ ಟಾಪ್ ಹೊಸ ಮತ್ತು ಉತ್ತಮ ಭದ್ರತಾ ವೈಶಿಷ್ಟö್ಯಗಳೊಂದಿಗೆ ಅಪ್ ಡೇಟ್ ಆಗಲಿದೆ. ಹೊಸ ಅಪ್ ಡೇಟ್ ಪ್ರಕಾರ, ಬಳಕೆದಾರರು ಲಾಗಿನ್ ಆಗುವ ಮುನ್ನ ಡೆಸ್ಕ್ ಟಾಪ್ ಆಪ್‌ನಲ್ಲಿ ಫಿಂಗರ್ ಪ್ರಿಂಟ್ ಅಥವಾ ಫೇಸ್ ಐಡಿಯನ್ನು ದೃಢೀಕರಿಸಬೇಕಾಗುತ್ತದೆ. ಹೊಸದಾಗಿ ಪರಿಚಯಿಸಲಾದ ಈ ವೈಶಿಷ್ಟö್ಯವು ಖಾತೆಗೆ ಹೆಚ್ಚುವರಿ ರಕ್ಷಣೆ ಒದಗಿಸುತ್ತದೆ.

ಮೇ.22 ರಂದು ವಿಶೇಷ ರೈಲು ಸೇವೆ: ಸಚಿವ ಸುರೇಶ್ ಅಂಗಡಿ

ಬೆಳಗಾವಿ: ಮೇ.22 ರಂದು ರಾಜ್ಯದಲ್ಲಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಖಾತೆ…