ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ. ಸಿನಿಮಾದಲ್ಲಿ ಮೂರು ಜಿಜ್ಞಾಸೆಗಳ ಎಳೆ ಇರುವುದಾಗಿ ರಾಮ್ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ.
ದಲಿತ ಹುಡುಗನ್ನು ವಿವಾಹವಾದ ಕಾರಣಕ್ಕೆ ಅಮೃತಾಳ ಪತಿಯನ್ನು ಮಾರುತಿ ರಾವ್ ಹತ್ಯೆಗೈದದ್ದು ನೈಜ ಘಟನೆ. ಇದನ್ನು ಆಧರಿಸಿ ಸಿನಿಮಾ ನಿರ್ಮಿಸಲು ರಾಮ್ ಗೋಪಾಲ್ ವರ್ಮಾ ಮುಂದಾಗಿದ್ದಾರೆ.
ಚಿತ್ರದಲ್ಲಿ ಮಗುವಿನ ಮೇಲೆ ತಂದೆಯ ನಿಂಯಂತ್ರಣಕ್ಕೆ ಇರಬೇಕಾದ ಮಿತಿ, ಮಗಳ ಸಂಭಾವ್ಯ ಒಳಿತು, ಯಾರೋ ಒಬ್ಬರ ಒಳಿತಿಗಾಗ ಇನ್ನೊಬ್ಬರನ್ನು ಕೊಲ್ಲುವುದು ನ್ಯಾಯವೇ? ಎಂಬ ವಿಷಯಗಳನ್ನು ಚಿತ್ರದಲ್ಲಿ ಒಳಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಇದು ಅಮೃತ ಮತ್ತು ಮಾರುತಿ ರಾವ್ ಅವರ ಹೃದಯ ಹಿಂಡುವ ಕತೆ. ತನ್ನ ಮಗಳನ್ನು ಅತಿಯಾಗಿ ಪ್ರೀತಿಸುವ ಅಪಾಯದ ಮಹಾಗಾಥೆ ಎಂದು ರಾಮ್ ಗೋಪಾಲ್ ವರ್ಮಾ ಕತೆಯ ಎಳೆಯ ಕುರಿತು ಹೇಳಿಕೊಂಡಿದ್ದಾರೆ.
ಚಿತ್ರದಲ್ಲಿ ಅಮೃತಾ ಪಾತ್ರವನ್ನು ಅವಂಚ ಸಾಹಿತಿ, ತಂದೆ ಮಾರುತಿ ರಾವ್ ಪಾತ್ರವನ್ನು ಶ್ರೀಕಾಂತ್ ಅಯ್ಯಂಗಾರ್ ನಿರ್ವಹಿಸುತ್ತಿದ್ದಾರೆ. ಈ ವಿಷಯವನ್ನು ಕೂಡ ಟ್ವೀಟರ್ ಮೂಲಕ ರಾಮ್ ಗೋಪಾಲ್ ವರ್ಮಾ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಿಯುಸಿ ಫಲಿತಾಂಶ ದಿನಾಂಕ ತಿಳಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಇಂದು ಪಿಯುಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.

ದೇಶದಲ್ಲಿ 7.20 ಲಕ್ಷ ಪಾಸಿಟಿವ್! : 20 ಸಾವಿರ ದಾಟಿದ ಸಾವಿನ ಸಂಖ್ಯೆ

ನವದೆಹಲಿ: ಕಳೆದ 24 ತಾಸುಗಳಲ್ಲಿ (ಸೋಮವಾರ ಮಧ್ಯಾಹ್ನ 12ರಿಂದ) ಮಧ್ಯಾಹ್ನ 12ಗಂಟೆಯೊಳಗೆ 22,252 ಹೊಸ ಪಾಸಿಟಿವ್…

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.