ಬೆಂಗಳೂರು : ನಗರದಲ್ಲಿ ಮಹಾಮಾರಿಯ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಹೆಚ್ಚಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ನಗರದ ಬಹುತೇಕ ಏರಿಯಾಗಳು ಸೀಲ್ಡೌಗನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ.
ಇಂದು ಸಿಎಂ ಜೊತೆ ಈ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಒಂದು ವೇಳೆ ಹೀಗೆ ನಗರದಲ್ಲಿ ಸಡಲಿಕೆ ಮುಂದುವರಿಸಿದರೆ ಕೊರೊನಾ ನಿಯಂತ್ರಣ ಅಸಾಧ್ಯ ಎಂದಿದ್ದಾರೆ. ನಗರದ ಸುಮಾರು 7 ಏರಿಯಾಗಳು ಕಂಪ್ಲೀಟ್ ಸೀಲ್ಡೌುನ್ ಮಾಡುವ ಸಾಧ್ಯತೆ ಇದೆ. ಚಾಮರಾಜಪೇಟೆ, ಚಿಕ್ಕಪೇಟೆ, ಕಲಾಸಿಪಾಳ್ಯ ಸೇರಿದಂತೆ ಹಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ನಗರದಲ್ಲಿ ಕೊರೊನಾ ಹೆಚ್ಚಾಗಲು ಸಡಲಿಕೆಯೇ ಕಾರಣ ಎನ್ನಲಾಗಿದೆ. ಜೊತೆಗೆ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮಾಡದಿರುವುದು ಕೂಡ ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾಗಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ಜೊತೆ ಸಭೆ ಮುಗಿಸಿದ ಬಳಿಕ ಬಹುತೇಕ ಇಂದೇ ಆಯ್ದ ಏರಿಯಾಗಳು ಸೀಲ್ಡೌಲನ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಮತ್ತೆ 6 ಕೊರೊನಾ ಪಾಸಿಟಿವ್!: ಒಂದು ಸಾವು

ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 322 ಕ್ಕೆ ಏರಿಕೆಯಾಗಿದೆ. ಇಂದು 05 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು

ಯಪ್ಪಾ..!, ಗಂಡ ತನ್ನ ಜೊತಿ ಜಗಳಾ ಆಡಂಗಿಲ್ಲಾ ಅಂತ ಡಿವೋರ್ಸ್ ಕೇಳ್ಯಾಳಂತ!

ಗಂಡ-ಹೆಂಡರ ಜಗಳ ಗಂಧ ತೀಡಿದಂಗ ಅಂತಾರ. ಅಷ್ಟ ಯಾಕ, ಗಂಡ-ಹೆಂಡರ ಜಗಳ ಉಂಡು ಮಲಗೋ ತನಕ ಅಂತಾನೂ ಅಂತಾರ. ಆದ್ರ ಗಂಡ ತನ್ನ ಜೊತಿಗೆ ಜಗಳಾನ ಆಡವಲ್ಲಾ, ತನಗ ಭಾಳ್ ಪ್ರೀತಿ ಮಾಡ್ತಾನಾ ಅಂತ ಹೆಣ್ಮಗಳ ಒಬ್ಬಾಕಿ ಕೋರ್ಟ್ ಕಟ್ಟಿ ಹತ್ತಿದ ಕತಿ ಇದು..

ಹಣ್ಣು ಮಾರಲು ಬಂದವರಿಗೆ ಕಲ್ಲು ತಗೊಂಡು ಓಡಿಸಿ: ಹಾವೇರಿಯಲ್ಲಿ ಡಂಗೂರ

ಕೇಳ್ರಪ್ಪೋ ಕೇಳ್ರಿ……… ಆ ಊರಿಂದ ಯಾರಾದ್ರು ಹಣ್ಣು ತರಕಾರಿ ಮಾರೋರ ಬಂದ್ರ ಕಲ್ಲು ತಗೊಂಡು ಓಡಿಸುವಂತೆ ಡಂಗೂರ.

ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತುವಂತೆ!: ಅದರ ಮೇಲೆ ಶೇ.18 ಜಿ.ಎಸ್.ಟಿ ಏಕಂತೆ?

ಕೇಂದ್ರ ಸರ್ಕಾರ ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತು ಎನ್ನುತ್ತದೆ . ಆದರೆ ತೆರಿಗೆ ಇಲಾಖೆಯು ಅದನ್ನು ‘ಆಲ್ಕೊಹಾಲ್’ ಕೆಟಗರಿಗೆ ಸೇರಿಸಿ ಶೇ.18 ಜಿ.ಎಸ್.ಟಿ ತೆರಿಗೆ ಹೇರಿದ್ದನ್ನು ಸಮರ್ಥಿಸುತ್ತದೆ.