ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ವಿಂಡೋ ಸೀಟ್ ಚಿತ್ರದ ಶೂಟಿಂಗ್ ಜನೇವರಿಯಲ್ಲಿ ಪೂರ್ಣಗೊಂಡಿತ್ತು. ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರು ತಿಂಗಳ ನಂತರ ಪ್ರಾರಂಭವಾಗಲಿದೆ. ಸದ್ಯ ಅವರ ಮೊದಲ ನಿರ್ದೇಶನದ ಚಿತ್ರದ ಕುರಿತು ಅಧಿಕೃತ ಪ್ರಕಟಣೆ ಹೊರ ಬಂದಿದೆ.

ಕೆಎಸ್‌ಕೆ ಶೋರೀಲ್ ಸಹಭಾಗಿತ್ವದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ನಿರೂಪ್ ಭಂಡಾರಿ ನಾಯಕನಾಗಿ ನಟಿಸಿರುವ ರೊಮ್ಯಾಂಟಿಕ್ – ಥ್ರಿಲ್ಲರ್ ಚಿತ್ರವನ್ನು ಫ್ಯಾಂಟಮ್ ನಿರ್ಮಾಪಕ ಮಂಜುನಾಥ್ ಗೌಡ ಅಲಿಯಾಸ್ ಜ್ಯಾಕ್ ಮಂಜು ನಿರ್ಮಾಣ ಮಾಡಿದ್ದಾರೆ.

ಶೀತಲ್ ನಿರ್ದೇಶಕರಷ್ಟೆ ಅಲ್ಲದೇ, ಚಿತ್ರಕ್ಕೆ ಕಥೆಯನ್ನೂ ಬರೆದಿದ್ದು ಅಮೃತ ಅಯ್ಯಂಗಾರ್ ಮತ್ತು ಸಂಜನಾ ಆನಂದ್ ಚಿತ್ರದ ಪ್ರಧಾನ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರವಿಶಂಕರ್ ಕೂಡ ಮುಖ್ಯ ಪಾತ್ರದಲ್ಲಿದ್ದು ನಟ ಸೂರಜ್ ಮತ್ತು ನಾಟಕ ಕಲಾವಿದ ಲೇಖಾ ಕೂಡ ತಂಡದ ಭಾಗವಾಗಿದ್ದಾರೆ.

ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ. ಡಿಒಪಿ ವಿಘ್ನೇಶ್ ರಾಜ್ ಕ್ಯಾಮೆರಾ ವರ್ಕ್ ಹಾಗೂ ರಿತ್ವಿತ್ ಎಡಿಟಿಂಗ್ ವರ್ಕ್ ಕೆಲಸದಲ್ಲಿ ತೊಡಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಶಾಲೆಯ ಸಿ.ಬಿ.ಎಸ್.ಇ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ: ಸ್ಥಳೀಯ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾ ಪೀಠದ ಸಿ.ಬಿ.ಎಸ್.ಇ. ಶಾಲೆಗೆ ೨೦೨೧-೨೨ನೇ ಸಾಲಿನ ಸಿ.ಬಿ.ಎಸ್.ಇ…

ಲಕ್ಷ್ಮೇಶ್ವರ: ಕಾಮಗಾರಿ ಮುಗಿದರೂ ಹಸ್ತಾಂತರವಾಗದ ಅಂಗನವಾಡಿ

ಬಡ ಮಕ್ಕಳ ಬದುಕಿನಲ್ಲಿ ಶಿಕ್ಷಣ ದಿವಿಗೆಯನ್ನು ಹಚ್ಚಬೇಕಾದ ಅಂಗನವಾಡಿ ಕೇಂದ್ರ ಇದ್ದು ಇಲ್ಲದಂತಾಗಿ ತಾಲೂಕಿನ ಆದರಹಳ್ಳಿ ಗ್ರಾಮದ 2ನೇ ವಾರ್ಡಿನ ಅಂಗನವಾಡಿ ಕೇಂದ್ರ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣ ಕೊಡುತ್ತಾ ಬಂದಿದ್ದಾರೆ. ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಅಂಗನವಾಡಿ ಕೇಂದ್ರವನ್ನು ಗುತ್ತಿಗೆದಾರರು ಹಸ್ತಾಂತರ ಮಾಡಿಲ್ಲ ಹಾಗೂ ಗ್ರಾ.ಪಂ.ಚುನಾವಣೆ ನಡೆದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೂ ಆಗಿದೆ. ಆದರೆ ಅಂಗನವಾಡಿ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ ಎಂದು 2 ವಾರ್ಡಿನ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೋರ ಹಾಕುತ್ತಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…