ಶ್ರೀನಗರ : ಲಡಾಖ್ ನಲ್ಲಿ ಚೀನಾ ಸಂಘರ್ಷ ನಡೆಸುತ್ತಿದ್ದರೆ, ಇನ್ನೊಂದೆಡೆ ಪಾಕ್ ತನ್ನ ಉಪಟಳ ಮುಂದುವರೆಸಿದೆ. ಗಡಿ ಉಲ್ಲಂಘಿಸಿ ಬಂದ ಪಾಕಿಸ್ತಾನ ಸೇನಾ ಯೋಧರು ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಇಂದು ಬೆಳಿಗ್ಗೆ ಪಾಕ್ ಸೈನಿಕರು ಗಡಿ ನಿಯಂತ್ರಣ ರೇಖೆಯ ಪೂಂಚ್ ಜಿಲ್ಲೆಯ ರಜೌರಿ ನೌಶೆರಾ ವಲಯದಲ್ಲಿ ಮತ್ತು ಕತೌ ಜಿಲ್ಲೆಯ ಐಬಿ ವಲಯದಲ್ಲಿ ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ದಾಳಿ ನಡೆಸಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಹತ್ತಿರ ನೌಶೆರಾ ವಲಯದ ಪ್ರದೇಶದಲ್ಲಿ ಕಾವಲು ಕಾಯುತ್ತಿದ್ದ ಸೇನಾ ಯೋಧ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡರು. ನಂತರ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಮಧ್ಯೆಯೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಸ್ಪ್ರೇಲಿಯಾದಲ್ಲಿ ಇಲಿ ಹಾವಳಿಯಂತೆ: ಪಾಷಾಣಕ್ಕಾಗಿ ಭಾರತಕ್ಕೆ ಆರ್ಡರ್

ಸಿಡ್ನಿ: ಆಸ್ಟೇಲಿಯಾದಲ್ಲಿ ಇಲಿಗಳ ಹಾವಳಿಯಿಂದ 5 ಸಾವಿರ ಕೋಟಿ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆಯಂತೆ! ಆಸ್ಟ್ರೇಲಿಯಾ ಪೂರ್ವದ 3 ರಾಜ್ಯಗಳ ಮೇಲೆ ಲಕ್ಷಾಂತರ ಸಂಖ್ಯೆಯಲ್ಲಿ ಇಲಿಗಳು ದಾಳಿ ಮಾಡುತ್ತಿದ್ದು, ಸಾವಿರಾರು ಕೋಟಿ ಮೌಲ್ಯದ ಕೃಷಿ ಉತ್ಪನ್ನಗಳನ್ನ ಇಲಿಗಳು ತಿಂದುಹಾಕಿವೆ.

ಅಕ್ಟೋಬರ್ 15ರವರೆಗೆ ಮರಳು ಗಣಿಗಾರಿಕೆ ನಿಷಿದ್ಧ: ಹೈಕೋರ್ಟ್

ಜಿಲ್ಲೆಯ ಮರಳು ಗಣಿಗಾರಿಕೆ ಕುರಿತಂತೆ ಸಲ್ಲಿಸಲಾಗಿದ್ದ ದಾವೆಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 15 ರವರೆಗೆ ಮರಳು ಗಣಿಗಾರಿಕೆ ನಿಷೇಧ ಮಾಡಿದೆ. ಬೆಂಗಳೂರು: ಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಹೈಕೋರ್ಟ್

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ಡಿಸಿ ಹಿರೇಮಠ ಎದುರಿಗೊಂದು ಪ್ರಶ್ನೆ?: ಸಾವಿಗೆ ಕಾರಣ ಸೋಂಕೊ? ಶುಗರೋ?

ಬೆಳಗಾವಿ: ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ, ಗೋಕಾಕ್ ತಾಲೂಕಿನ ಕೊಣ್ಣೂರಿನ 55 ವರ್ಷದ ಮಹಿಳೆಯೊಬ್ಬರು ಕೊವಿಡ್ನಿಂದ ಮೃತರಾಗಿದ್ದಾರೆ. ಈ ಮಾಹಿತಿಯನ್ನು ಜಿಲ್ಲಾಡಳಿತ ರಾಜ್ಯ ಆರೋಗ್ಯ ಇಲಾಖೆಗೆ ಕಳಿಸಿತ್ತು. ಜಿಲ್ಲಾ ವೈದ್ಯಾಧಿಕಾರಿಗಳು ಟೆಸ್ಟ್ ವರದಿ ಬರುವ ಮುನ್ನವೇ ಸಾವು ಕೊವಿಡ್ ಕಾರಣದಿಂದ ನಿರ್ಧರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.