ಶ್ರೀನಗರ : ಲಡಾಖ್ ನಲ್ಲಿ ಚೀನಾ ಸಂಘರ್ಷ ನಡೆಸುತ್ತಿದ್ದರೆ, ಇನ್ನೊಂದೆಡೆ ಪಾಕ್ ತನ್ನ ಉಪಟಳ ಮುಂದುವರೆಸಿದೆ. ಗಡಿ ಉಲ್ಲಂಘಿಸಿ ಬಂದ ಪಾಕಿಸ್ತಾನ ಸೇನಾ ಯೋಧರು ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಇಂದು ಬೆಳಿಗ್ಗೆ ಪಾಕ್ ಸೈನಿಕರು ಗಡಿ ನಿಯಂತ್ರಣ ರೇಖೆಯ ಪೂಂಚ್ ಜಿಲ್ಲೆಯ ರಜೌರಿ ನೌಶೆರಾ ವಲಯದಲ್ಲಿ ಮತ್ತು ಕತೌ ಜಿಲ್ಲೆಯ ಐಬಿ ವಲಯದಲ್ಲಿ ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ದಾಳಿ ನಡೆಸಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಹತ್ತಿರ ನೌಶೆರಾ ವಲಯದ ಪ್ರದೇಶದಲ್ಲಿ ಕಾವಲು ಕಾಯುತ್ತಿದ್ದ ಸೇನಾ ಯೋಧ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡರು. ನಂತರ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಮಧ್ಯೆಯೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಭಾವೈಕ್ಯದ ಮಾಧುರ್ಯ ಬೆಳಕು ತೋಂಟದ ಸಿದ್ದಲಿಂಗ ಶ್ರೀ- ಪ್ರೊ.ಆಶಾದೇವಿ

ವರದಿ: ಗುಲಾಬಚಂದ ಜಾಧವಗದಗ : ತಾಯಿ ತನ್ನ ಮಕ್ಕಳಿಗೆ ಎಂದೂ ಭೇದಭಾವ ಮಾಡಲ್ಲ.ಹಾಗೆಯೇ ಬೆಂಕಿ,ಗಾಳಿ,ನೀರು ನಿಸರ್ಗದ…

ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ ಎಷ್ಟು ಗೊತ್ತಾ?

ಅಮೆರಿಕಾ ರಾಷ್ಟ್ರದಲ್ಲಿ ವೈರಸ್ ನಿಯಂತ್ರಮಕ್ಕೆ ಬರುವ ಬೆಳವಣಿಗೆಗಳು ಕಂಡು ಬರುತ್ತಿದೆ ಎಂಬ ಭರವಸೆಗಳು ಜನರಲ್ಲಿ ಮೂಡುತ್ತಿರುವ ನಡುವಲ್ಲೇ ಇದೀಗ ಮತ್ತೆ ಅಮೆರಿಕಾದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ.

ಗ್ರಾಮಪಂಚಾಯಿತಿಗೆ ಸದಸ್ಯರ ನೇಮಕ: ಕಾಂಗ್ರೆಸ್ ವಿರೋಧ

ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಮೂಲಕ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು.

ಕೊರೋನಾ ವಾರಿಯರ್ಸ್ ಗೆ ಗ್ರಾಮಸ್ಥರಿಂದ ಗೌರವ

ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.ಆಶಾ ಕಾರ್ಯಕರ್ತೆಯರು, ಆರೋಗ್ಯ…