ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.
ಈ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತ್ರಿಪುರಾಂತ್ ಎಂಬಲ್ಲಿ ನಡೆದಿದೆ. ಅಶ್ವಿನ್ ಮೆಟ್ರೆ (26) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವ್ಯಕ್ತಿ ಕೊರೊನಾ ಟೆಸ್ಟ್ ವರದಿ ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ವ್ಯಕ್ತಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಹೊಂದಿದ್ದ. ಈ ವ್ಯಕ್ತಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಗಂಟಲಿನ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಕೈಗೆ ಬರುವ ಮುನ್ನವೇ ತಮಗೆ ಕೊರೋನಾ ಇದೆ ಎಂದು ಭಯಗೊಂಡ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.