ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಪ್ರಸ್ತುತ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ ಪ್ರಮಾಣ ಶೇ.4ರಷ್ಟಿದ್ದು, ಇದರ ಅಂದಾಜಿನ ಮೇರೆಗೆ ರಾಜ್ಯದಲ್ಲಿ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರ ದಾಟುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸದ್ಯ ಜನ ಸಾಮಾನ್ಯರು ಎಚ್ಚೆತ್ತುಕೊಳ್ಳುವ ಅವಶ್ಯಕತೆ ಇದೆ. ಸಾಮಾಜಿಕ ಅಂತರ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಕೆ ಮಾಡುವುದು. ಕೈಗಳನ್ನು ಆಗಾಗ ಸ್ವಚ್ಛವಾಗಿ ತೊಳೆದುಕೊಳ್ಳುವುದನ್ನು ಮಾಡುವುದರಿಂದ ಸೋಂಕು ಪ್ರಸರಣದ ವೇಗವನ್ನು ತಡೆಯಬಹುದು ಎಂದು ಹೇಳಿದ್ದಾರೆ.

ನಿತ್ಯ ಸೋಂಕಿತರ ಸಂಖ್ಯೆ ಪ್ರಮಾಣ ಶೇ.3ರಷ್ಟಿದ್ದು, ಈ ವೇಗದಲ್ಲಿ ಅಂದಾಜಿಸುವುದಾದರೆ ರಾಜ್ಯದಲ್ಲಿ ಸಕ್ರಿಯ ಸೋಂಕಿತರ ಪ್ರಮಾಣ 17 ಸಾವಿರ ಗಡಿ ದಾಟಬಹುದು. ಒಂದು ವೇಳೆ ಈ ಪ್ರಮಾಣ ಶೇ.4ಕ್ಕೆ ಏರಿಕೆಯಾದರೆ ಆಗ ರಾಜ್ಯದಲ್ಲಿ ಸೋಂಕಿತರ ಪ್ರಮಾಣ 25 ಸಾವಿರವಾಗುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

ಕೊವಿಡ್-19 ಸೋಂಕು: ಉಸಿರಾಟದ ಸಮಸ್ಯೆ ಸ್ಥಳದಲ್ಲೇ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9…

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ(KSCST) ಪ್ರಕಟಿಸಿದ ಈ ವರ್ಷದ (2019-20) ಫಲಿತಾಂಶದಲ್ಲಿ, ನಗರದ ಪ್ರತಿಷ್ಠಿತ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದಿದ್ದಾರೆ.

ಕೋವಿಡ್ ನಿಂದಾಗಿ ನಲುಗಿದ ಭಾರತಕ್ಕೆ ನೆರವು ನೀಡುವುದಾಗಿ ಅಮೆರಿಕ ಕಾನ್ಸುಲೇಟ್ ಕಚೇರಿಯ ಕನ್ನಡಲ್ಲೂ ಸಂದೇಶದಲ್ಲಿ ಪ್ರಕಟ

ದೇಶ ಕೊರೋನಾ ಸೋಂಕಿನಿಂದ ನಲಗುತ್ತಿದ್ದು, ದೇಶಕ್ಕೆ ಅಗತ್ಯ ನೆರವು ನೀಡುವುದಾಗಿ ಅಮೆರಿಕ ಸರ್ಕಾರ ಪ್ರಕಟಿಸಿದೆ ಎಂದು ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಯ ಕನ್ನಡಲ್ಲೂ ಸಂದೇಶ ಪ್ರಕಟಿಸಿದೆ.