ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.
ಬೆನಕಟ್ಟಿ ಗ್ರಾಮದಲ್ಲಿ ಬೆನಕಟ್ಟಿ- ಶಿರೂರ ನಡುವಿನ ಜಿಲ್ಲಾ ಮುಖ್ಯ ರಸ್ತೆಯ 6 ಕಿ.ಮೀ ರಸ್ತೆ ಸುಧಾರಣೆ, ಡಾಂಬರೀಕರಣದ 5 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನರೆವೇರಿಸಿದರು.
ಬೇವೂರಿನಲ್ಲಿ ಬೂದಿಹಾಳ ಬೋಡನಾಯಕದಿನ್ನಿ ಕ್ರಾಸ್ ವರೆಗಿನ ಜಿಲ್ಲಾ ಮುಖ್ಯ ರಸ್ತೆಯ 4,75 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿ 5 ಕೋಟಿ ರೂ. ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾಗುವ 12 ಲಕ್ಷ ರೂ.ಗಳ ವೆಚ್ಚದ ಬಾಬು ಜಗಜೀವನ ರಾಮ್ ಸಮುದಾಯ ಭವನ ಮತ್ತು ಶಾಸಕರ ಅನುದಾನದ 5 ಲಕ್ಷ ರೂ. ಗಳ ವೆಚ್ಚದ ಭರಮಣ್ಣನ ಗುಡಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಸಿ.ಆರ್.ಪರನಗೌಡ್ರ, ಸದಸ್ಯರುಗಳಾದ ನಿಂಗಪ್ಪ ಮಾಗನೂರ,ರಾಜಶೇಖರ ಅಂಗಡಿ, ಬೆನಕಟ್ಟಿ ಗ್ರಾಪಂ ಅಧ್ಯಕ್ಷ ರೇವಣ್ಣ ಆಲೂರ, ಬಿಜೆಪಿ ಗ್ರಾಮೀಣ ಅಧ್ಯಕ್ಷ ಸುರೇಶ್ ಕೊಣ್ಣೂರ, ಸಂಗಮೇಶ ಹಿತ್ತಲಮನಿ ಹಾಗೂ ಪಿಡಬ್ಲುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈಶ್ವರ ಕುರಬಗಟ್ಟಿ, ಎನ್.ಜಿ.ಪಾಟೀಲ, ಗುತ್ತಿಗೆದಾರರಾದ ಸಿ.ಕೆ.ಒಂಟಿಗೋಡಿ,ಎನ್.ಆರ.ಕುಲಕರ್ಣಿ, ಗ್ರಾಪಂ ಕಾರ್ಯದರ್ಶಿ ಆರ್.ವೈ.ಅಪ್ಪನ್ನವರು, ಗ್ರಾಮದ ಬಿಜೆಪಿಯ ನಾಯಕರು ಮತ್ತು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಕೊಪ್ಪಳ ಜಿಲ್ಲೆಯಲ್ಲಿಂದು 36 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 36 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!

ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.

ನಿರಾಣಿಗೆ ಹೈಕಮಾಂಡ್ ಬುಲಾವ್

ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.

ಗರ್ಭಿಣಿಗೆ ಸೋಂಕು: ಗದಗ ಹೆರಿಗೆ ಆಸ್ಪತ್ರೆ ಸೀಲ್ ಡೌನ್

ಗದಗ: ನಗರದ ಕೆ.ಸಿ ರಾಣಿ ರಸ್ತೆಯಲ್ಲಿರುವ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಹಿಳೆಯೋರ್ವರ ಗಂಟಲುದ್ರವದ…