ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ. ಮಡಿದಿಯನ್ನು ಮಾವನ ಮನೆಗೆ ಬಿಟ್ಟು ಹೋಗಲು ಬಂದ ಅಳಿಯನಿಗೆ ಮಾವನೂರಿಗೆ ಬಂದು ಹೋದ ಮೇಲೆ ಆತನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇನ್ನು ಈತನ ಟ್ರಾವೆಲ್ ಹಿಸ್ಟರಿ ಬೆನ್ನಟ್ಟಿದಾಗ ಗೊತ್ತಾಗಿದ್ದು, ಧಾರವಾಡ ಜಿಲ್ಲೆಯ ಅಳಿಯನಿಂದ ಗದಗ ಜಿಲ್ಲೆಗೂ ಸೋಂಕು ವ್ಯಾಪಿಸಿದೆ ಎನ್ನುವ ವಿಷಯ.

ಆಗಿದ್ದೇನು…?
ಜೂನ್ 6ರಂದು ಗದಗ ತಾಲೂಕಿನ ಹರ್ತಿಯ ಮಾವನ ಮನೆಗೆ ಧಾರವಾಡದಿಂದ ಬಂದ ಅಳಿಯ ಅದೇ ದಿನ ತನ್ನೂರಿಗೆ ಮರಳಿದ್ದಾನೆ. ಕೆಲದಿನಗಳ ನಂತರ ತೀವ್ರ ಜ್ವರದಿಂದಾಗಿ ಆತ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದಾನೆ. ಆಗ ಪರೀಕ್ಷೆಯಲ್ಲಿ 12-06-2020 ರಂದು ಆತನಿಗೆ‌ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಅಷ್ಟೊತ್ತಿಗಾಗಲೇ ಅಳಿಯ (ಪಿ-6255)ನಿಂದಾಗಿ ಹರ್ತಿಯಲ್ಲೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹರ್ತಿಯ ಅವರ ಬೀಗರ ಕುಟುಂಬವನ್ನು ಪರೀಕ್ಷೆಗೊಳಪಡಿಸಿದಾಗ ಕುಟುಂಬದ ಇಬ್ಬರಲ್ಲಿ ಹಾಗೂ ಗ್ರಾಮದ ಓರ್ವ ವೈದ್ಯನಿಗೆ ಜೂನ್ 18 ರಂದು ಪಾಸಿಟಿವ್ ದೃಢಪಟ್ಟಿದೆ. ಈ ಕುಟುಂಬದ ಪಿ-7854(23 ವರ್ಷದ) ಪುರುಷನಿಗೆ ತಪಾಸಣೆ ಮಾಡಿದ ಪರಿಣಾಮ ವೈದ್ಯನಿಗೂ ಪಿ-7632(40 ವರ್ಷ) ಸೋಂಕು ತಗುಲಿದೆ.

ನಾಲ್ಕೈದು ಗ್ರಾಮಗಳಲ್ಲಿ ಆತಂಕ
ಆದ್ರೆ ಸೋಂಕಿತ ವೈದ್ಯ, ಹರ್ತಿ ಗ್ರಾಮ ಸೇರಿದಂತೆ ಕಣವಿ, ಹೊಸೂರು, ಬೆಳದಡಿ ಗ್ರಾಮದ ಹಲವರಿಗೆ ಚಿಕಿತ್ಸೆ ನೀಡಿದ್ದಾರೆ. ಇದರಿಂದಾಗಿ ಇವರು ಚಿಕಿತ್ಸೆ ನೀಡಿದ ಗ್ರಾಮಗಳಲ್ಲಿ 97 ಜನರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಕ್ವಾರಂಟೈನ್ ನಲ್ಲಿರುವವರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮುಖ್ಯವಾಗಿ ವೈದ್ಯನ ಪತ್ನಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದು, ಅವರು ಕಾರ್ಯನಿರ್ವಹಿಸುವ ಶಾಲೆಯ ಶಿಕ್ಷಕರನ್ನು ಹೋಂ ಕ್ವಾರಂಟೈನ್ ನಲ್ಲಿಡಲಾಗಿದೆ. ಇದರಿಂದ ಸುತ್ತಲಿನ ಗ್ರಾಮಗಳ ಜೊತೆಗೆ ಅವರ ಪತ್ನಿ ಕಾರ್ಯನಿರ್ವಹಿಸುವ ಊರಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Leave a Reply

Your email address will not be published. Required fields are marked *

You May Also Like

ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಚಸ್ ಅಲ್ಲೋ ಮಾರಾಯ ಚೀಯರ್ಸ್ ಅನ್ನು ಶು..!! ಇಂಗ್ಲೀಷ್ ಬ್ಯಾಡ ಕನ್ನಡದಾಗ ಹೇಳು..!

ಶು..!, ಕರ್ನಾಟಕದಾಗ ಹುಟ್ಟಿ ಚೆಸ್ ಅಂತ ಇಂಗ್ಲೀಷ್ ನ್ಯಾಗ್ ಹೇಳ ಬ್ಯಾಡ್ರಿ ಅಂದ, ಕನ್ನಡಾಭಿಮಾನಿಗಳು ಯಾರಾದ್ರು ಕೇಳಿಸಿಕೊಂಡ್ರ ಕುಡುಕರೆಲ್ಲ ಕನ್ನಡ ಬಿಟ್ಟು ಇಂಗ್ಲೀಷ್ ಮಾತಾಡಾಕತ್ಯಾರ ಅಂತ ಸ್ಟ್ರೈಕ್ ಮಾಡಿ ಬಾರ್ ಬಂದ್ ಮಾಡಿಸಿಗಿಡಿಸ್ಯಾರೋ ಮಾರಾಯ್ರ.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್

ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಣತನಕ್ಕೆ ಶಾಸಕ ಎಚ್ಕೆ ಪಾಟೀಲರ ಜಾಣ ಉತ್ತರ

ಸಾರ್ವಜನಿಕ ಲೆಕ್ಕ ಪತ್ರ ಸಮೀತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಸಭೆ ನಡೆಸುವ ಕುರಿತು ಪತ್ರ ಬರೆದಿದ್ದರೂ ಅವರ ಆಪ್ತ ಕಾರ್ಯದರ್ಶಿ ಎಷ್ಟು ದಿನವಾದ್ರು ಪತ್ರ ತಲುಪಿರಲಿಲ್ಲ ನಿನ್ನೆಯಷ್ಟೆ ಪತ್ರ ತಲುಪಿದೆ ಎಂದು ಜಾಣತನ ಪ್ರದರ್ಶಿಸಿದ್ದರು.