ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ. ಮಡಿದಿಯನ್ನು ಮಾವನ ಮನೆಗೆ ಬಿಟ್ಟು ಹೋಗಲು ಬಂದ ಅಳಿಯನಿಗೆ ಮಾವನೂರಿಗೆ ಬಂದು ಹೋದ ಮೇಲೆ ಆತನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇನ್ನು ಈತನ ಟ್ರಾವೆಲ್ ಹಿಸ್ಟರಿ ಬೆನ್ನಟ್ಟಿದಾಗ ಗೊತ್ತಾಗಿದ್ದು, ಧಾರವಾಡ ಜಿಲ್ಲೆಯ ಅಳಿಯನಿಂದ ಗದಗ ಜಿಲ್ಲೆಗೂ ಸೋಂಕು ವ್ಯಾಪಿಸಿದೆ ಎನ್ನುವ ವಿಷಯ.

ಆಗಿದ್ದೇನು…?
ಜೂನ್ 6ರಂದು ಗದಗ ತಾಲೂಕಿನ ಹರ್ತಿಯ ಮಾವನ ಮನೆಗೆ ಧಾರವಾಡದಿಂದ ಬಂದ ಅಳಿಯ ಅದೇ ದಿನ ತನ್ನೂರಿಗೆ ಮರಳಿದ್ದಾನೆ. ಕೆಲದಿನಗಳ ನಂತರ ತೀವ್ರ ಜ್ವರದಿಂದಾಗಿ ಆತ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದಾನೆ. ಆಗ ಪರೀಕ್ಷೆಯಲ್ಲಿ 12-06-2020 ರಂದು ಆತನಿಗೆ‌ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಅಷ್ಟೊತ್ತಿಗಾಗಲೇ ಅಳಿಯ (ಪಿ-6255)ನಿಂದಾಗಿ ಹರ್ತಿಯಲ್ಲೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹರ್ತಿಯ ಅವರ ಬೀಗರ ಕುಟುಂಬವನ್ನು ಪರೀಕ್ಷೆಗೊಳಪಡಿಸಿದಾಗ ಕುಟುಂಬದ ಇಬ್ಬರಲ್ಲಿ ಹಾಗೂ ಗ್ರಾಮದ ಓರ್ವ ವೈದ್ಯನಿಗೆ ಜೂನ್ 18 ರಂದು ಪಾಸಿಟಿವ್ ದೃಢಪಟ್ಟಿದೆ. ಈ ಕುಟುಂಬದ ಪಿ-7854(23 ವರ್ಷದ) ಪುರುಷನಿಗೆ ತಪಾಸಣೆ ಮಾಡಿದ ಪರಿಣಾಮ ವೈದ್ಯನಿಗೂ ಪಿ-7632(40 ವರ್ಷ) ಸೋಂಕು ತಗುಲಿದೆ.

ನಾಲ್ಕೈದು ಗ್ರಾಮಗಳಲ್ಲಿ ಆತಂಕ
ಆದ್ರೆ ಸೋಂಕಿತ ವೈದ್ಯ, ಹರ್ತಿ ಗ್ರಾಮ ಸೇರಿದಂತೆ ಕಣವಿ, ಹೊಸೂರು, ಬೆಳದಡಿ ಗ್ರಾಮದ ಹಲವರಿಗೆ ಚಿಕಿತ್ಸೆ ನೀಡಿದ್ದಾರೆ. ಇದರಿಂದಾಗಿ ಇವರು ಚಿಕಿತ್ಸೆ ನೀಡಿದ ಗ್ರಾಮಗಳಲ್ಲಿ 97 ಜನರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಕ್ವಾರಂಟೈನ್ ನಲ್ಲಿರುವವರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮುಖ್ಯವಾಗಿ ವೈದ್ಯನ ಪತ್ನಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದು, ಅವರು ಕಾರ್ಯನಿರ್ವಹಿಸುವ ಶಾಲೆಯ ಶಿಕ್ಷಕರನ್ನು ಹೋಂ ಕ್ವಾರಂಟೈನ್ ನಲ್ಲಿಡಲಾಗಿದೆ. ಇದರಿಂದ ಸುತ್ತಲಿನ ಗ್ರಾಮಗಳ ಜೊತೆಗೆ ಅವರ ಪತ್ನಿ ಕಾರ್ಯನಿರ್ವಹಿಸುವ ಊರಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Leave a Reply

Your email address will not be published. Required fields are marked *

You May Also Like

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.

ಮುಂಡರಗಿ ಮಿನಿ ವಿಧಾನಸೌಧಕ್ಕೂ ಶುರುವಾಯಿತೆ ಕೊರೊನಾ ಭೀತಿ..!

ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಋತುಚಕ್ರದ ಬಗ್ಗೆ ಬೋಲ್ಡ್ ಆಗಿ ಮಾತನಾಡಿದ ಮಾದಕ ನಟಿ!

ಬೆಂಗಳೂರು: ಆಗ ನನಗೆ 14 ವರ್ಷ ವಯಸ್ಸು. ಈ ವೇಳೆ ನಮ್ಮ ಮನೆಯಲ್ಲಿ ದೇವರ ಪೂಜೆ ನಡೆಯುತ್ತಿತ್ತು. ಆ ಪೂಜೆಯಲ್ಲಿ ನಾನು ಪಾಲ್ಗೊಂಡಿದ್ದೆ. ಆದರೆ ಆಗಲೇ ನನಗೆ ಪೀರಿಯಡ್ಸ್ ಆಯಿತು. ಆಗ ಅಮ್ಮ ನನ್ನ ಜೊತೆಯಲ್ಲಿ ಇರಲಿಲ್ಲ. ಆದ್ದರಿಂದ ನಾನು ನನ್ನ ಪಕ್ಕದಲ್ಲಿದ್ದ ಚಿಕ್ಕಮ್ಮನಿಗೆ ಈ ವಿಚಾರವನ್ನು ತಿಳಿಸಿದೆ. ನಾನು ಆ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ಕೂಡ ಧರಿಸಿರಲಿಲ್ಲ ಎಂದು ಅನೇಕ ವರ್ಷಗಳ ಹಿಂದೆ ನಡೆದಿದ್ದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.