ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ ಪರಿಚಯವಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಸಾರಿಗೆ ಸಂಸ್ಥೆಯ ಬಸ್ ಚಾಲಕನಲ್ಲಿ ಸೋಂಕು ದೃಢಪಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನ ಹೊರ ದೇಶ ಹಾಗೂ ರಾಜ್ಯದಿಂದ ಬಂದವರಲ್ಲಿ ಕೊರೊನಾ ಕಂಡು ಬಂದಿತ್ತು. ಸದ್ಯ ಅಂತರ್ ಜಿಲ್ಲಾ ಸಂಚಾರ ಮಾಡಿದ ವ್ಯಕ್ತಿಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಜನರು ಆತಂಕದಲ್ಲಿ ದಿನ ಕಳೆಯುವಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಸಾರಿಗೆ ಸಂಸ್ಥೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದ ನಿರ್ವಾಹಕನಿಗೆ ಕೊರೊನಾ ಸೋಂಕು ದೃಢವಾಗಿದೆ. ಈತನ ಸಂಪರ್ಕದಲ್ಲಿದ್ದ ಸಹೋದ್ಯೋಗಿಗಳು, ಸ್ನೇಹಿತರು ಜೊತೆಗೆ ಬಸ್ಸಿನಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಗೂ ಈಗ ಆತಂಕ ಶುರುವಾಗಿದೆ.

ಜೂ. 11ರಂದು ಯಲ್ಲಾಪುರದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ದು, ಬಳಿಕ ಜೂ.13ಕ್ಕೆ ವಾಪಸ್ಸಾಗಿದ್ದ, ಇವರಿಗೆ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಹೀಗಾಗಿ ಕಂಡಕ್ಟರಿಗೆ ಕ್ವಾರಂಟೈನ್ ವಿಧಿಸಲಾಗಿತ್ತು. ಜೂ.16ಕ್ಕೆ ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದ ಇವರ ಗಂಟಲು ದ್ರವವನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಶಾಸಕರೇ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯನ್ನೊಮ್ಮೆ ನೋಡಿ!

ರೋಗಿಗಳ ಪಾಲಿಗೆ ಆಸ್ಪತ್ರೆಗಳೇ ಸಂಜೀವಿನಿ ಅಂತಾರೆ. ಆದರಲ್ಲೂ ಸರ್ಕಾರಿ ಆಸ್ಪತ್ರೆಗಳಂತೂ ಬಡರೋಗಿಗಳಿಗೆ ಅನುಕೂಲವಾಗಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸರ್ಕಾರಿ ಆಸ್ಪತ್ರೆ ಗಬ್ಬು ನಾರುತ್ತಿದೆ.

ಗ್ರಾಮ ಪಂಚಾಯತಿಗಳು ಸಭೆ ಹಾಗೂ ಹಣಕಾಸಿನ ವ್ಯವಹಾರ ನಡೆಸುವಂತಿಲ್ಲ

ಈಗಾಗಲೇ ಅವಧಿ ಪೂರ್ಣಗೊಳಿಸಿರುವ ಗ್ರಾಮ ಪಂಚಾಯತಿಗಳು ಹಣಕಾಸಿನ ವ್ಯವಹಾರ ಹಾಗೂ ಸಭೆ ನಡೆಸುವಂತಿಲ್ಲ.

ಕೆರೆಗೆ ಮರುಜೀವ ನೀಡಿದ ಧರ್ಮಸ್ಥಳ ಯೋಜನೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊAಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಈ ಔಷಧಿ ನೀಡಬಾರದಂತೆ

ರೋಗಿಗಳು ಎಷ್ಟೇ ಅನಾರೋಗ್ಯಕ್ಕೆ ತುತ್ತಾಗಿದ್ದರೂ ಅವರಿಗೆ ಗಿಲೀಡ್‌ನ ರೆಮ್ಡೆಸಿವಿರ್ ಔಷಧ ನೀಡುವುದನ್ನು ಶಿಫಾರಸು ಮಾಡುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.