ಲಡಾಖ್: ಭಾರತ ಹಾಗೂ ಚೀನಾ ಸೇನಾಧಿಕಾರಿಗಳು ಬರೋಬ್ಬರಿ 11 ಗಂಟೆಗಳ ಕಾಲ ಗಡಿ ಸಂಘರ್ಷದ ಕುರಿತು ಮಾತುಕತೆ ನಡೆಸಿದ್ದಾರೆ.

ಭಾರತೀಯ ಸೇನೆಯ 14 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಹರೀಂದರ್ ಸಿಂಗ್ ಹಾಗೂ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ಕಮಾಂಡರ್ ಮೇಜರ್ ಜನರಲ್ ಲಿಯು ಲಿನ್ 11 ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಪ್ರಾರಂಭವಾದ ಮಾತುಕತೆ 11 ಗಂಟೆಗಳ ಕಾಲ ಮುಂದುವರೆದಿದ್ದು, ಈ ಕುರಿತು ಹೆಚ್ಚಿನ ವರದಿ ನಿರೀಕ್ಷಿಸಲಾಗುತ್ತಿದೆ. ಚೀನಾದ ಭಾಗದಲ್ಲಿರುವ ಎಲ್ಎಸಿಯಲ್ಲಿ ಸಭೆ ನಡೆದಿದ್ದು, ಈಶಾನ್ಯ ಲಡಾಖ್ ನಲ್ಲಿ ಉಂಟಾಗಿದ್ದ ಘರ್ಷಣೆಯಿಂದ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ಶಾಂತಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಇದು ಉಭಯ ದೇಶಗಳ ಕಾರ್ಪ್ಸ್ ಕಮಾಂಡರ್ ಗಳ ನಡುವೆ ನಡೆದ ಎರಡನೇ ಸಭೆಯಾಗಿದೆ.

ಸೇನಾಪಡೆಗಳನ್ನು ಈಶಾನ್ಯ ಲಡಾಖ್ ನಿಂದ ಹಾಗೂ ಇತರ ಪ್ರದೇಶಗಳಿಂದ ಹಿಂಪಡೆಯುವ ಜೂ.6 ರ ಸಭೆಯ ನಿರ್ಣಯವನ್ನು ಗೌರವಿಸಿ ಬದ್ಧವಾಗಿರುವಂತೆ ಭಾರತ ಈ ಸಭೆಯಲ್ಲಿ ಚೀನಾಗೆ ಹೇಳಲಿದೆ ಎಂದು ನಿರೀಕ್ಷಿಸಲಾಗಿತ್ತು. ಲಡಾಖ್ ಗೆ ಹತ್ತಿರದಲ್ಲಿರುವ ಭಾರತೀಯ ಪ್ರದೇಶದಲ್ಲಿ ಪಿಎಲ್ಎ ಮಾಡಿರುವ ನಿರ್ಮಾಣ ಕಾಮಗಾರಿಗಳ ಬಗ್ಗೆಯೂ ಜೂ.೨೨ರ ಸಭೆಯಲ್ಲಿ ಚರ್ಚೆಗೆ ಬಂದಿರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?

ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.

ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆ

ಉತ್ತರಪ್ರಭ ಸುದ್ದಿ ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ…

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

ವಿಪ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಸ್ತಿ ಎಷ್ಟು? : ಮಾಡಿದ ಸಾಲ ಎಷ್ಟು..?

ಬೆಂಗಳೂರು: ವಿಧಾನ ಪರಿಷತ್‍ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ರೂ. 1,224…