ಲಡಾಖ್: ಭಾರತ ಹಾಗೂ ಚೀನಾ ಸೇನಾಧಿಕಾರಿಗಳು ಬರೋಬ್ಬರಿ 11 ಗಂಟೆಗಳ ಕಾಲ ಗಡಿ ಸಂಘರ್ಷದ ಕುರಿತು ಮಾತುಕತೆ ನಡೆಸಿದ್ದಾರೆ.

ಭಾರತೀಯ ಸೇನೆಯ 14 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಹರೀಂದರ್ ಸಿಂಗ್ ಹಾಗೂ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ಕಮಾಂಡರ್ ಮೇಜರ್ ಜನರಲ್ ಲಿಯು ಲಿನ್ 11 ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಪ್ರಾರಂಭವಾದ ಮಾತುಕತೆ 11 ಗಂಟೆಗಳ ಕಾಲ ಮುಂದುವರೆದಿದ್ದು, ಈ ಕುರಿತು ಹೆಚ್ಚಿನ ವರದಿ ನಿರೀಕ್ಷಿಸಲಾಗುತ್ತಿದೆ. ಚೀನಾದ ಭಾಗದಲ್ಲಿರುವ ಎಲ್ಎಸಿಯಲ್ಲಿ ಸಭೆ ನಡೆದಿದ್ದು, ಈಶಾನ್ಯ ಲಡಾಖ್ ನಲ್ಲಿ ಉಂಟಾಗಿದ್ದ ಘರ್ಷಣೆಯಿಂದ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ಶಾಂತಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಇದು ಉಭಯ ದೇಶಗಳ ಕಾರ್ಪ್ಸ್ ಕಮಾಂಡರ್ ಗಳ ನಡುವೆ ನಡೆದ ಎರಡನೇ ಸಭೆಯಾಗಿದೆ.

ಸೇನಾಪಡೆಗಳನ್ನು ಈಶಾನ್ಯ ಲಡಾಖ್ ನಿಂದ ಹಾಗೂ ಇತರ ಪ್ರದೇಶಗಳಿಂದ ಹಿಂಪಡೆಯುವ ಜೂ.6 ರ ಸಭೆಯ ನಿರ್ಣಯವನ್ನು ಗೌರವಿಸಿ ಬದ್ಧವಾಗಿರುವಂತೆ ಭಾರತ ಈ ಸಭೆಯಲ್ಲಿ ಚೀನಾಗೆ ಹೇಳಲಿದೆ ಎಂದು ನಿರೀಕ್ಷಿಸಲಾಗಿತ್ತು. ಲಡಾಖ್ ಗೆ ಹತ್ತಿರದಲ್ಲಿರುವ ಭಾರತೀಯ ಪ್ರದೇಶದಲ್ಲಿ ಪಿಎಲ್ಎ ಮಾಡಿರುವ ನಿರ್ಮಾಣ ಕಾಮಗಾರಿಗಳ ಬಗ್ಗೆಯೂ ಜೂ.೨೨ರ ಸಭೆಯಲ್ಲಿ ಚರ್ಚೆಗೆ ಬಂದಿರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಒಂದೇ ಕುಟುಂಬದ ನಾಲ್ವರಲ್ಲಿ ಕಂಡು ಬಂದ ಕೊರೊನಾ!

ಇಲ್ಲಿಯ ಕೆಂಜಾರು ತಂಗಡಿ ಪ್ರದೇಶದ ಒಂದೇ ಮನೆಯ ನಾಲ್ಕು ಜನರಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ.

ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳದ ಹೊರತು ಭಾರತ ಜಗ್ಗುವುದಿಲ್ಲ..

ಲಡಾಖ್‌ನಲ್ಲಿ ಉಭಯ ರಾಷ್ಟ್ರಗಳ ನಡುವೆ ಗಡಿ ಸಮಸ್ಯೆ ಸೃಷ್ಟಿಯಾದ ಬಳಿಕ ಸೇನೆ ನಿಯೋಜಿಸಲಾಗಿದ್ದು, ಇದೀಗ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ತಮ್ಮ ಸೇನೆಯನ್ನು ವಾಪಸ್ ಕರೆಸಿಕೊಳ್ಳದ ಹೊರತು ಭಾರತ ಸೇನಾಪಡೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವುದಿಲ್ಲ ಎಂದು ಸೇನೆ ತಿಳಿಸಿದೆ.

ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಟೆಸ್ಟ್ – ಪರೀಕ್ಷೆಯಲ್ಲಿ ಪಾಸ್ ಆದ ಸಿಎಂ!

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕೊರೊನಾ ವರದಿ ನೆಗೆಟಿವ್ ಎಂದು ಬಂದಿದೆ. ನಿನ್ನೆ…

ರಾಜ್ಯದಲ್ಲಿಂದು 4169 ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4169 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…