ಬಳ್ಳಾರಿ: ಹಲವು ವರ್ಷಗಳಿಂದ ದೂರವಾಗಿದ್ದ ಅಣ್ಣ – ತಂಗಿಯನ್ನು ಮಹಾಮಾರಿ ಒಂದುಗೂಡಿಸಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಲಾಥುರ್ ನಿಂದ 2016ರಿಂದಲೂ ಕಾಣೆಯಾಗಿದ್ದ ಸುಪ್ರೀಯಾ ಇತ್ತೀಚಿಗೆ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಅಣ್ಣ – ತಂಗಿ ಒಂದಾಗಿದ್ದು, ಸಹೋದರ ಪ್ರಸನ್ನ ಜೋಶಿಯ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.

ಕಾಣೆಯಾಗಿದ್ದ ತನ್ನ ತಂಗಿಯ ಫೋಟೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ ಮಹಾರಾಷ್ಟ್ರದ ಧಾರ್ಮಿಕ ಸ್ವಯಂ ಸೇವಾ ಸಂಸ್ಥೆಯೊಂದರ ನೌಕರನಾಗಿರುವ ಪ್ರಸನ್ನ ಜೋಶಿ, ಬಳ್ಳಾರಿಗೆ ಬಂದು, ತನ್ನ ಒಡಹುಟ್ಟಿದ ಸಹೋದರಿಯನ್ನು ಭೇಟಿ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಪಾಸಣೆ ನಡೆಸುವಾಗ ಸುಪ್ರೀಯಾ ವಸತಿ ಹೀನಳಾಗಿದ್ದು, ಮಾನಸಿಕ ನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿತ್ತು. ನಂತರ ವಿಮ್ಸ್ ಆಸ್ಪತ್ರೆಗೆ ಆ ಮಹಿಳೆಯನ್ನು ಕರೆದೊಯ್ದು ಕೋವಿಡ್-19 ಪರೀಕ್ಷೆ ನಡೆಸಿದ ಬಳಿಕ ನೆಗೆಟಿವ್ ಬಂದಿತ್ತು. ತದನಂತರ ಶಾಂತಿ ಧಾಮ ಆರ್ಪೆಂಜ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಿ,ಆಕೆಯ ಕುಟುಂಬದ ಹಿನ್ನೆಲೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಸುಪ್ರಿಯಾ ಜೊತೆಗೆ ಅಲ್ಲಿನ ಸಿಬ್ಬಂದಿ ಮಾತುಕತೆ ನಡೆಸಿದ್ದರು.

ಆಕೆ ಮಾನಸಿಕ ಅಸ್ವಸ್ಥೆಯಿಂದ ಪೂರ್ಣ ಪ್ರಮಾಣದ ಚೇತರಿಕೆ ಕಷ್ಟ ಸಾಧ್ಯ ಎಂದು ಅರಿತು ಸಾಮಾಜಿಕ ಜಾಲತಾಣದಲ್ಲಿ ಆಕೆಯ ಸಂಬಂಧಿಕರ ಪತ್ತೆಗಾಗಿ ಫೋಸ್ಟ್ ಹಾಕಲಾಗಿತ್ತು. ಜೂನ್ ಮೊದಲ ವಾರದಲ್ಲಿ ಸುಪ್ರೀಯಾ ಸಹೋದರ ಪ್ರಸನ್ನ ಜೋಶಿ, ಬಳ್ಳಾರಿಗೆ ಬಂದು ನಮ್ಮನ್ನು ಸಂಪರ್ಕಿಸಿದ್ದಾರೆ. ಕ್ವಾರಂಟೈನ್ ಮುಗಿದ ಬಳಿಕ ನೆಗೆಟಿವ್ ವರದಿ ಬಂದಿದ್ದರಿಂದ ಅವರ ತಂಗಿಯನ್ನು ಭೇಟಿ ಮಾಡಲು ಅವಕಾಶ ನೀಡಲಾಯಿತು. ಈ ಮೂಲಕ ಇಬ್ಬರನ್ನು ಮತ್ತೆ ಒಂದುಗೂಡಿಸಲಾಯಿತು ಎಂದು ಶಾಂತಿಧಾಮದ ಹಿರಿಯ ಸಮಾಲೋಚಕರೊಬ್ಬರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೆಜಿ “ಬಂಡಿ”ಗೆ ನಾನು ತಮಾಷೆ ಮಾಡಿದ್ದೆ: ಬಿ ಎಸ್ ವೈ ಸ್ಪಷ್ಟನೆ

ಉತ್ತರಪ್ರಭ ಸುದ್ದಿನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ…

ಮತದಾನ ಬಹಿಸ್ಕಾರ ಮಾಡಿದರೆ ಸಂವಿಧಾನಕ್ಕೆ ಅವಮಾನ ಮಾಡಿದಂತೆ : ಕಳಕಪ್ಪ ಬಂಡಿ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಅಂಬೇಡ್ಕರ್…

ಚೀನಾ ವಿಚಾರ ರಾಹುಲ್ ಹೇಳಿಕೆ ಹಾಸ್ಯಾಸ್ಪದ : ಪ್ರಹ್ಲಾದ್ ಜೋಷಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚೀನಾ ವಿಚಾರದಲ್ಲಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ಹದಿನೈದು ನಿಮಿಷದಲ್ಲಿ ಚೀನಾದ ಸೈನಿಕರನ್ನು ಹೊರಹಾಕುವ ಹೇಳಿಕೆ ನೀಡುತ್ತಾರೆ ಇದು ಹಾಸ್ಯಾಸ್ಪದ ಹೇಳಿಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದರು.

ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?

ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.