ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ಕೃತ್ಯಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, ಮುಂಬಯಿನ ಶಾರ್ಪ್‌ ಶೂಟರ್‌ ಯೂಸೂಫ್ ಚ್ಕಾನ್‌ನನ್ನು ವಶಕ್ಕೆ ಪಡೆದಿದ್ದಾರೆ.

ಪಾತಕ ಲೋಕದಲ್ಲಿ ಶಾರ್ಪ್‌ ಶೂಟರ್‌, ಭೂಗತ ಲೋಕದ ದೊರೆಗಳ ಏಜೆಂಟ್‌ ಎಂಬ ಕುಖ್ಯಾತಿ ಪಡೆದಿದ್ದಾನೆ. ಸದ್ಯ ಆತನ ಕೃತ್ಯಗಳ ಬಗ್ಗೆ ತನಿಖೆ ಮುಂದುವರಿಯಲಿದೆ.

2007ರಲ್ಲಿ ಮಂಗಳೂರಿನಲ್ಲಿ ನಡೆದ ಬಿಲ್ಡರ್‌ ಸುಬ್ಬರಾವು ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಯೂಸೂಫ್ ಗುರಿಯಾಗಿದ್ದಾನೆ. ರವಿ ಪೂಜಾರಿಯನ್ನು ವಿಚಾರಣೆ ನಡೆಸುತ್ತಿದ್ದಾಗ ಯೂಸೂಫ್ ಬಗ್ಗೆ ಬಾಯ್ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ರವಿ ಪೂಜಾರಿ ನಡೆಸಿರಬಹುದಾದ ಇತರೆ ಕೃತ್ಯಗಳಲ್ಲಿ ಯೂಸೂಫ್ ಪಾತ್ರದ ಕುರಿತು ತನಿಖೆ ನಡೆಸಲು ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಬಾಲಿವುಡ್‌ ನಿರ್ಮಾಪಕ ನಿರ್ದೇಶಕರೊಬ್ಬರಿಗೆ ಕೊಲೆ ಬೆದರಿಕೆ, ಸುಲಿಗೆ ಸೇರಿ ಉದ್ಯಮಿಗಳ ಕೆಲವು ಕೊಲೆ, ಸುಲಿಗೆ, ಜೀವ ಬೆದರಿಕೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಹಿರಿಯ ಪೊಲೀಸ್‌ ಆಧಿಕಾರಿಯೊಬ್ಬರು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…

5 ರಂದು ನಡೆಯುವ ಯುವಜನ ಸಂಕಲ್ಪ ನಡಿಗೆ ಯಾತ್ರೆ ಯಶಸ್ವಿಗೆ ಮನವಿ

ಆಲಮಟ್ಟಿ: 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂಗವಾಗಿ ಸದೃಢ, ಸಶಕ್ತ ಭಾರತಕ್ಕಾಗಿ ಅಗಷ್ಟ 5 ರಂದು…

ಗದಗನಲ್ಲಿ ಗುಣಮುಖನಾಗಿ ಮನೆಗೆ ಮರಳಿದ ಸೋಂಕಿತ

ಗದಗ:ಕೊರೋನಾ ಸೋಂಕಿತ 62 ವರ್ಷದ ವ್ಯಕ್ತಿ ಇಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆಯಿಂದ…

ನಗರ ಸಭೆ ಚುನಾವಣೆ: 32ನೇ ವಾರ್ಡ ಬಿಜೆಪಿ ಪಾಲಿಗೆ

ನಗರ ಸಭೆ ಚುನಾವಣೆ: 32ನೇ ವಾರ್ಡ ಬಿಜೆಪಿ ಪಾಲಿಗೆ ಗದಗ ಬೇಟಗೇರಿ:ನಗರ ಸಭೆ 31ನೇ ವಾರ್ಡನ…