ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ಕೃತ್ಯಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, ಮುಂಬಯಿನ ಶಾರ್ಪ್‌ ಶೂಟರ್‌ ಯೂಸೂಫ್ ಚ್ಕಾನ್‌ನನ್ನು ವಶಕ್ಕೆ ಪಡೆದಿದ್ದಾರೆ.

ಪಾತಕ ಲೋಕದಲ್ಲಿ ಶಾರ್ಪ್‌ ಶೂಟರ್‌, ಭೂಗತ ಲೋಕದ ದೊರೆಗಳ ಏಜೆಂಟ್‌ ಎಂಬ ಕುಖ್ಯಾತಿ ಪಡೆದಿದ್ದಾನೆ. ಸದ್ಯ ಆತನ ಕೃತ್ಯಗಳ ಬಗ್ಗೆ ತನಿಖೆ ಮುಂದುವರಿಯಲಿದೆ.

2007ರಲ್ಲಿ ಮಂಗಳೂರಿನಲ್ಲಿ ನಡೆದ ಬಿಲ್ಡರ್‌ ಸುಬ್ಬರಾವು ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಯೂಸೂಫ್ ಗುರಿಯಾಗಿದ್ದಾನೆ. ರವಿ ಪೂಜಾರಿಯನ್ನು ವಿಚಾರಣೆ ನಡೆಸುತ್ತಿದ್ದಾಗ ಯೂಸೂಫ್ ಬಗ್ಗೆ ಬಾಯ್ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ರವಿ ಪೂಜಾರಿ ನಡೆಸಿರಬಹುದಾದ ಇತರೆ ಕೃತ್ಯಗಳಲ್ಲಿ ಯೂಸೂಫ್ ಪಾತ್ರದ ಕುರಿತು ತನಿಖೆ ನಡೆಸಲು ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಬಾಲಿವುಡ್‌ ನಿರ್ಮಾಪಕ ನಿರ್ದೇಶಕರೊಬ್ಬರಿಗೆ ಕೊಲೆ ಬೆದರಿಕೆ, ಸುಲಿಗೆ ಸೇರಿ ಉದ್ಯಮಿಗಳ ಕೆಲವು ಕೊಲೆ, ಸುಲಿಗೆ, ಜೀವ ಬೆದರಿಕೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಹಿರಿಯ ಪೊಲೀಸ್‌ ಆಧಿಕಾರಿಯೊಬ್ಬರು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು!

ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಅಲ್ಲಿ ಮತ್ತೆ ನೆತ್ತರು ಹರಿದಿದೆ.

ಲಾಕ್ ಡೌನ್ ತೆರವಿನಿಂದ ಕೊರೊನಾ ಪ್ರಮಾಣದಲ್ಲಿ ಹೆಚ್ಚಳ: ಕೇಜ್ರಿವಾಲ್

ಲಾಕ್ ಡೌನ್ ತೆರವಿನಿಂದಾಗಿ ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದರು.

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…

ರಾಜ್ಯದ 31 ಪ್ರತಿಭೆಗಳಿಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ..!

ದಕ್ಷಿಣ ಕನ್ನಡ(ಸವಣೂರು) :ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ ಮಂಗಳೂರು, ಯುವ ಸಬಲಿಕರಣ ಮತ್ತು ಕ್ರೀಡಾ…