ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ ನೋಡಿದಾಗ ದೂರದ ಕೊಡಗಿನ ವ್ಯಾಪಾರಿ ಸೋಂಕು ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಗೂ ಸಂಕಟ ತಂದಿದೆ.

ಹೌದು, ಪಿ-9215 ಕೇಸ್ ಕೊಡಗು ಜಿಲ್ಲೆಯ ಶನಿವಾರ ಸಂತೆ ನಿವಾಸಿಯ ಟ್ರಾವೆಲ್ ಹಿಸ್ಟರಿ ದೂರದ ಕೊಡಗಿನಿಂದ ಮುಂಡರಗಿ ಪೊಲೀಸ್ ಠಾಣೆವರೆಗೆ ವ್ಯಾಪಿಸಿದೆ. 17-06-2020 ರಂದು ಸೋಂಕಿತ ಪಿ-9315 ಪರಿಚಿತರ ವಿಚಾರಣೆ ಸಂಬಂಧ ಮುಂಡರಗಿ ಠಾಣೆಗೆ ಸ್ನೇಹಿತರೊಂದಿಗೆ ಬಂದಿದ್ದರು. 17-06-2020 ಇಲ್ಲಿನ ಪೊಲೀಸ್ ಠಾಣೆಗೆ ಬಂದು 18-06-2020 ರಂದು ತಮ್ಮೂರಿಗೆ ಮರಳಿದ್ದಾರೆ.
ಇಲ್ಲಿಂದ ಮರಳಿದ ಮೇಲೆ ಸೋಂಕು ದೃಢಪಟ್ಟಿದ್ದು ಇದರಿಂದ ಮುಂಡರಗಿ ಠಾಣೆಗೆ ಕೊರೊನಾ ಕಂಟಕ ಎದುರಾಗಿದೆ. ಈ ಸಂಬಂಧ ಮುಂಜಾಗೃತ ಕ್ರಮವಾಗಿ ಮುಂಡರಗಿ ಪೊಲೀಸ್ ಠಾಣೆಯ ಕೆಲ ಸಿಬ್ಬಂದಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ.
ಈ ಘಟನೆಯಿಂದ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಜಿಲ್ಲೆಯ 15 ಪೊಲೀಸ್ ಠಾಣೆಯಲ್ಲಿ ಮುಂಜಾಗೃತ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಪೊಲೀಸ್ ಠಾಣೆಯನ್ನು ಸಾನಿಟೈಸ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

1 comment
Leave a Reply

Your email address will not be published. Required fields are marked *

You May Also Like

ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ

ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.

ಇಂಧನ ಬೆಲೆ ಏರಿಕೆ ಖಂಡಿಸಿ ಕರವೇಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ದೇಶದಲ್ಲಿ ಇಂಧನ ಬೆಲೆ, ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ, ಶೀಘ್ರವಾಗಿ ಬೆಲೆ ಏರಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ) ಬಣದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಯಚೂರ ನ್ಯಾಯಾಧೀಶರ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ…

ಕೆ.ಎಸ್.ಆರ್.ಟಿ.ಸಿ ನೌಕರರ ವಿರುದ್ಧ ಹುನ್ನಾರ!: ಸಂಬಳವಿಲ್ಲದೇ ಒಂದ್ ವರ್ಷ ರಜೆಗೆ ನಿರ್ಧಾರ!

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ನೌಕರರ ಹಕ್ಕುಗಳನ್ನು ದಮನ ಮಾಡಲು ವ್ಯವಸ್ಥಿತ ಹುನ್ನಾರ ನಡೆದಿದೆ ಎಂದು ಚಾಲಕರು ಮತ್ತು ನಿರ್ವಾಹಕರು ಆತಂಕಗೊಂಡಿದ್ದಾರೆ.