ಬೆಂಗಳೂರು: ರಾಜ್ಯದ ಬಹುತೇಕ ಗ್ರಾಮ ಪಂಚಾಯತಿಗಳು ಅವಧಿ ಪೂರ್ಣಗೊಂಡಿದ್ದು, ಈಗಾಗಲೇ ಕೊರೊನಾ ಹಿನ್ನೆಲೆ ಸದ್ಯಕ್ಕೆ ಚುನಾವಣೆ ನಡೆಸದೇ ಅವಧಿ ಪೂರ್ಣಗೊಳಿಸಿದ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ನೇಮಕಗೊಂಡ ಆಡಳಿತಾಧಿಕಾರಿಗಳ ಕರ್ತವ್ಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ.

ಆಡಳಿತಾಧಿಕಾರಿಗಳ ಅಧಿಕಾರ ಮತ್ತು ಕರ್ತವ್ಯದ ಬಗ್ಗೆ ಮಾರ್ಗಸೂಚಿ

  • ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 8(4) ರನ್ವಯ ಆಡಳಿತಾಧಿಕಾರಿಯನ್ನು ಈ ಅಧಿನಿಯಮದ ಉದ್ದೇಶಕ್ಕಾಗಿ ಕ್ರಮಬದ್ಧವಾಗಿ ರಚಿಸಿದ ಗ್ರಾಮ ಪಂಚಾಯತಿ ಎಂದು ಭಾವಿಸಲಾಗಿದೆ.
  • ಸದರಿ ಅಧಿನಿಯಮದ ಪ್ರಕರಣ 8 (3)ರನ್ವಯ ಆಡಳಿತಾಧಿಕಾರಿಯೂ ಗ್ರಾಮ ಪಂಚಾಯತಿಯ ಎಲ್ಲ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು ಚಲಾಯಿಸತಕ್ಕದ್ದು. ಮತ್ತು ನೆರವೇರಿಸತಕ್ಕದ್ದಾಗಿದೆ.
  • ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ಆಯವ್ಯಯ ಮತ್ತು ಲೆಕ್ಕ ಪತ್ರಗಳು) ನಿಯಮಗಳು, 2006 ಅನ್ವಯ ಗ್ರಾಮ ಪಂಚಾಯತಿಯ ಹಣಕಾಸಿನ ವ್ಯವಹಾರವನ್ನು ಆಡಳಿತಾಧಿಕಾರಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಂಟಿಯಾಗಿ ನಿರ್ವಹಿಸತಕ್ಕದ್ದು.
  • ವಾರ್ಡ ಸಭೆ ಮತ್ತು ಗ್ರಾಮ ಸಭೆಗಳನ್ನು ಕಾಲಕಾಲಕ್ಕೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.
  • ಅಧಿನಿಯಮದ ಪ್ರಕರಣ 58 ರಂತೆ ಗ್ರಾಮ ಪಂಚಾಯತಿ ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು.
  • ಅಧಿನಿಯಮದ ಪ್ರಕರಣ 60 ರಂತೆ ಗ್ರಾಮ ಪಂಚಾಯತಿಯ ಸಾಮಾನ್ಯ ಅಧಿಕಾರಗಳನ್ನು ಚಲಾಯಿಸತಕ್ಕದ್ದು
  • ಅಧಿನಿಯಮದ ಪ್ರಕರಣ 62 ರಂತೆ ಅಧ್ಯಕ್ಷನ ಪ್ರಕಾರ್ಯಗಳು ಮತ್ತು ಅಧಿಕಾರಗಳನ್ನು ಚಲಾಯಿಸತಕ್ಕದ್ದು
  • ಕೋವಿಡ್ 19 ಹರಡದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆಯನ್ನು ಸರ್ಕಾರದ ಸುತ್ತೋಲೆ ಸಂಖ್ಯೆ ಗ್ರಾಅಪ 86 ಉಖಾಯೋ 2019 ದಿನಾಂಕ 27-03-2020 ರಚಿಸಲಾಗಿದ್ದು, ಆಡಳಿತಾಧಿಕಾರಿಯೂ ಅಧ್ಯಕ್ಷರಾಗಿರುವುದುರಿಂದ ಸದರಿ ಕಾರ್ಯಪಡೆಯ ಕರ್ತವ್ಯಗಳನ್ನು ನಿರ್ವಹಸತಕ್ಕದ್ದು
  • ಗ್ರಾಮ ಪಂಚಾಯತಿ ಗ್ರಂಥಾಲಯಗಳ ನಿರ್ವಹಣೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಾಮ ಪಂಚಾಯತಿಗಳಿಗೆ ವರ್ಗಾಯಿಸಲಾಗಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳ ನಿರ್ವಹಣೆ ಮಾಡತಕ್ಕದ್ದು ಮತ್ತು ಗ್ರಂಥಾಲಯ ಮೇಲ್ವೀಚಾರಕರಿಗೆ ಗೌರವ ಧನವನ್ನು ಮಾಸಿಕವಾಗಿ ಪಾವತಿಸತಕ್ಕದ್ದು
  • ಗ್ರಾಮ ಪಂಚಾಯತಿ ನೌಕರರಿಗೆ ಮಾಸಿಕವಾಗಿ ಕನಿಷ್ಟ ವೇತನ ಪಾವತಿಸತಕ್ಕದ್ದ
  • ಸರ್ಕಾರದ ಸುತ್ತೋಲೆ ಸಂಖ್ಯೆ : ಗ್ರಾಅಪ 74 ಗ್ರಾಪಂಸಿ 2017(ಭಾಗ-1) ದಿನಾಂಕ 12-03-2018ರಲ್ಲಿ ಗ್ರಾಮ ಪಂಚಾಯತಿಗಳು ಯಾವುದೇ ಹುದ್ದೆಗಳಿಗೆ ನೇಮಕಾತಿ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಆಡಳಿತಾಧಿಕಾರಿಯೂ ಗ್ರಾಮ ಪಂಚಾಯತಿಗೆ ಯಾವುದೇ ನೌಕರರನ್ನು ನೇಮಕ ಮಾಡಿಕೊಳ್ಳತಕ್ಕದ್ದಲ್ಲ.
Leave a Reply

Your email address will not be published. Required fields are marked *

You May Also Like

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಮನಸ್ಸೆಂಬ ಮಾಯೆಯೂ ಮತ್ತು ಸಮಾಜ ವಿರೋಧಿ ಸೀಲೂ…!!!

ಯಾರೋ ಒಬ್ಬರು ಚೈನ್ ಸ್ಮೋಕರ್ ಒಬ್ಬನನ್ನು ಕೇಳಿದರಂತೆ…, ಏನ್ರೀ ಅಷ್ಟೊಂದು ಸಿಗರೇಟ್ ಸೇದತೀರಾ ಅಂತ? ಅದಕ್ಕೆ ಆ ಚೈನ್ ಸ್ಮೋಕರ್ ಹೇಳಿದ್ದು..

ನಿರಾಣಿಗೆ ಹೈಕಮಾಂಡ್ ಬುಲಾವ್

ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.