ಗದಗ: ಜಿಲ್ಲೆಯ ಪಿಎಲ್‍ಡಿ/ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್) ಬ್ಯಾಂಕ್ ಎಲ್ಲ ಸುಸ್ತಿ ಸಾಲಗಾರರು ಜೂ.30ರೊಳಗೆ ಸುಸ್ತಿ ಸಾಲದ ಅಸಲು ಪಾವತಿಸಿ ಬಡ್ಡಿ ಮನ್ನಾ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕಸ್ಕಾರ್ಡ್ ಬ್ಯಾಂಕ್ ನಿರ್ದೇಶಕ ಪಿ.ಕೆ.ರಾಯನಗೌಡ್ರ ತಿಳಿಸಿದರು.

ನಗರದ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಕಸ್ಕಾರ್ಡ್) ಬ್ಯಾಂಕ್‍ನ ಗದಗ ಶಾಖಾ ಕಛೇರಿ ಆವರಣದಲ್ಲಿ ಜೂ.22 ರಂದು ನಡೆದ ಅಭಿವೃದ್ಧಿ ಕ್ರೀಯಾ ಯೋಜನೆ ಮತ್ತು ಜಿಲ್ಲಾ ಸಲಹಾ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ 378 ರೈತ ಸಾಲಗಾರರು 2.78 ಕೋಟಿ ರೂ.ಗಳ ಅಸಲನ್ನು ಪಾವತಿಸಿದ್ದು, 1.62 ಕೋಟಿ ರೂ.ಗಳ ಬಡ್ಡಿ ಮನ್ನಾ ಸೌಲಭ್ಯ ಪಡೆದಿದ್ದಾರೆ. ಅದರಂತೆ ಜಿಲ್ಲೆಯ ಪಿಕಾರ್ಡ್ ಬ್ಯಾಂಕ್‍ನ ಒಟ್ಟು 1,677 ರೈತಸಾಲಗಾರರಿಂದ ಒಟ್ಟು 9.05 ಕೋಟಿ ರೂ.ಗಳ ಸುಸ್ತಿ ಸಾಲದ ಅಸಲು ಪಾವತಿಸಿದರೆ, ಒಟ್ಟು 4.95 ಕೋಟಿ ರೂ.ಗಳ ಬಡ್ಡಿ ಮನ್ನಾ ಸೌಲಭ್ಯ ಗದಗ ಜಿಲ್ಲೆಯ ರೈತರಿಗೆ ದೊರೆಯಲಿದೆ. ಇನ್ನುಳಿದ ಪಿಕಾರ್ಡ್ ಬ್ಯಾಂಕುಗಳ ಒಟ್ಟು 1,299 ಸುಸ್ತಿ ಸಾಲಗಾರರಿಗೆ ಜೂ.30ರವರೆಗೆ ತಮ್ಮ ಸುಸ್ತಿ ಸಾಲದ ಅಸಲು ಪಾವತಿಸಲು ಅವಕಾಶ ನೀಡಲಾಗಿದೆ. ರೈತರು ನಿಗದಿತ ಸಮಯದೊಳಗೆ ಅಸಲು ಪಾವತಿಸಿ ಬಡ್ಡಿ ಮನ್ನಾ ಯೋಜನೆಯ ಸದುಪಯೋಗ ಪಡೆಯಬೇಕೆಂದು ಪಿ.ಕೆ.ರಾಯನಗೌಡ್ರ ಸೂಚಿಸಿದರು.

ಸಭೆಯಲ್ಲಿ ವಿವಿಧ ತಾಲ್ಲೂಕುಗಳ ಪಿಕಾರ್ಡ್ ಬ್ಯಾಂಕ ಅಧ್ಯಕ್ಷರಾದ ಜಿ.ವ್ಹಿ. ಬಳಗಾನೂರ, ಬಿ.ವ್ಹಿ. ಪಾಟೀಲ, ಎಮ್.ಎಸ್. ಪಾಟೀಲ, ಎ.ಆರ್. ಮಲ್ಲನಗೌಡ್ರ , ಎಚ್.ಆರ್. ಕಬ್ಬೇರಳ್ಳಿ , ಪಿಕಾರ್ಡ್/ಕಸ್ಕಾರ್ಡ್ ಬ್ಯಾಂಕ್ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಅನೈತಿಕ ಸಂಬಂಧ : ಪತಿ ಕೊಲೆ, ಇಬ್ಬರ ಬಂಧನ

ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಪ್ರೀಯಕರನ ಜತೆಗೂಡಿ ಪತಿನ್ನೆ ಕೊಲೆ ಮಾಡಿರುವ ಘಟನೆ ಸಮೀಪದ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ನಡೆದಿದೆ.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ

ಈಗಾಗಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಜನರನ್ನು ಆವರಿಸಿದೆ. ಇನ್ನು ಜಲಾಶಯಗಳಲ್ಲಿಯೂ ಕೂಡ ಹೆಚ್ಚು ನೀರು ಸಂಗ್ರಹವಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮೊದಲಾದ ಮಾಹಿತಿ ಇಲ್ಲಿದೆ

ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ರೋಣದಲ್ಲಿ ಬೈಕ್ ಪಲ್ಟಿ ಸವಾರ ಸಾವು

ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಬೈಕ್ ಸವಾರ ಮುಗಳಿ ಗ್ರಾಮಕ್ಕೆ ಕೆಲಸಕ್ಕಾಗಿ ಹೊರಟಿದ್ದ ವೇಳೆ, ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.