ಗದಗ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮ ವಹಿಸಿ, ಜೂನ್ 25 ರಿಂದ ಜು.03ರವರೆಗೆ ಜರುಗುವ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಸುರಕ್ಷಿತ ಹಾಗೂ ಅತ್ಯಂತ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ವಿವರ ಇಂತಿದೆ.
2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜಿಲ್ಲೆಯ 58 ಪರೀಕ್ಷಾ ಕೇಂದ್ರಗಳಲ್ಲಿ ನಾಳೆಯಿಂದ ಜೂ.25 ರಿಂದ ಜು.03 ರವರೆಗೆ ನಡೆಯಲಿವೆ. ಜಿಲ್ಲೆಯಲ್ಲಿ ಒಟ್ಟು 14,210 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಅದರಲ್ಲಿ ಗದಗ ಶಹರದ 14 ಪರೀಕ್ಷಾ ಕೇಂದ್ರಗಳಲ್ಲಿ 2,708 ವಿದ್ಯಾರ್ಥಿಗಳು, ಗದಗ ಗ್ರಾಮೀಣದ 8 ಕೇಂದ್ರಗಳಲ್ಲಿ 2,330 ವಿದ್ಯಾರ್ಥಿಗಳು ಸೇರಿ ಮುಂಡರಗಿಯ 8 ಕೇಂದ್ರಗಳಲ್ಲಿ 1,800, ನರಗುಂದದ 6 ಕೇಂದ್ರಗಳಲ್ಲಿ 1,349, ರೋಣದ 12 ಕೇಂದ್ರಗಳಲ್ಲಿ 3,275 ಹಾಗೂ ಶಿರಹಟ್ಟಿ ತಾಲೂಕಿನ 10 ಕೇದ್ರಗಳಲ್ಲಿ 2,748 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸಾರಿಗೆ ಹಾಗೂ ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. 


ಜಿಲ್ಲೆಯ ನಾಲ್ಕು ತಾಲ್ಲೂಕಿನಲ್ಲಿರುವ ಕಂಟೈನ್‍ಮೆಂಟ್ ಪ್ರದೇಶದಿಂದ ಬರುವ 31 ವಿದ್ಯಾರ್ಥಿಗಳಿಗೆ 4 ವಾಹನಗಳ  ವ್ಯವಸ್ಥೆಯನ್ನು ಜಿಲ್ಲಾಧಿಕಾರಿಗಳು ಮಾಡಿರುತ್ತಾರೆ. ಹಾಗೂ ಇವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ.

ಹೊಸದಾಗಿ ತೆರೆಯಲಾದ  7  ಉಪಕೇಂದ್ರಗಳು

ಸರಕಾರಿ ಪ್ರೌಢಶಾಲೆ ಕೋಟುಮಚಗಿ, ಬಿ.ಎಚ್. ಪಾಟೀಲ ಪ್ರೌಢಶಾಲೆ ಲಕ್ಕುಂಡಿ, ಶ್ರೀ ಹಾಲಶಿವಯೋಗೇಶ್ವರ ಪ್ರೌಢಶಾಲೆ ಪೇಠಾಲೂರ, ಎಸ್.ಜಿ.ಎಂ. ಪ್ರೌಢಶಾಲೆ ಕಲಕೇರಿ,  ಶಿವಯೋಗೇಶ್ವರ ಪ್ರೌಢಶಾಲೆ ಹೆಬ್ಬಾಳ, ಸರಕಾರಿ ಪ್ರೌಢಶಾಲೆ ಮಾಗಡಿ, ಎಸ್.ಜೆ.ಎಫ್. ಪ್ರೌಢಶಾಲೆ ಬೆಳ್ಳಟ್ಟಿ.

ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳು

  • ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.
  • ಪರೀಕ್ಷಾ ಕೇಂದ್ರ ಪ್ರವೇಶಿಸುವಾಗ ಮತ್ತು ಹೊರ ಹೋಗುವಾಗ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ.
  • 58 ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಸ್ಯಾನಿಟೈಸ್ ಮಾಡಲಾಗಿದೆ.
  • ಆಸನ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿದೆ. ಪ್ರವೇಶ ದ್ವಾರದಲ್ಲೆ ವಿದ್ಯಾರ್ಥಿಗಳ ಆರೋಗ್ಯವನ್ನು ತಪಾಸಣೆ ಮಾಡಲಾಗುವುದು.
  • ಈಗಾಗಲೇ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಹಾಗೂ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಉಚಿತವಾಗಿ ಮಾಸ್ಕ್ ಬಿ.ಇ.ಓ ರವರ ಮೂಲಕ ವಿತರಿಸಲಾಗಿದೆ.
  • ಪ್ರತಿ ವಿದ್ಯಾರ್ಥಿ ಬ್ಯಾಗ್‍ನಲ್ಲಿ ನೀರಿನ ಬಾಟಲ್, ಆಹಾರವನ್ನು ತರಲು ಸೂಚಿಸಲಾಗಿದೆ.
  • ಸ್ಯಾನಿಟೈಸರ್ ಕೊಟ್ಟು, ಥರ್ಮಲ್ ಸ್ಕ್ಯಾನ್ ಮಾಡಿ ವಿದ್ಯಾರ್ಥಿಗಳನ್ನು ಕೊಠಡಿಗೆ ಕಳುಹಿಸಲು ಅಗತ್ಯ ಪ್ರಮಾಣದಲ್ಲಿ ಆರೋಗ್ಯ ಸಹಾಯಕರು ಹಾಗೂ ವೈದ್ಯರನ್ನು ನಿಯೋಜಿಸಲು ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.
  • ಪ್ರತಿ ಪರೀಕ್ಷಾ ಕೇಂದ್ರಗಳ ಸುತ್ತಲೂ 144 ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿರುತ್ತಾರೆ.
  • ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುರಕ್ಷಿತವಾಗಿ ಪರೀಕ್ಷೆ ನಡೆಯಲು ಸೂಕ್ತ ಪೋಲೀಸ್ ಬಂದೋಬಸ್ತ್ ಜಿಲ್ಲಾ ಪೋಲೀಸ್ ಇಲಾಖೆಯಿಂದ ಒದಗಿಸಲಾಗಿದ್ದು, ಶಾಂತಿ-ಸುವ್ಯವಸ್ಥೆಯಿಂದ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

You May Also Like

ಬಾಲೆಹೊಸೂರು ಗ್ರಾಪಂ ಅಧ್ಯಕ್ಷ ಚುನಾವಣೆ: ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

ಬಾಳೆಹೊಸೂರು ಗ್ರಾಮ ಪಂಚಾಯತಿಗೆ ಇಂದು ನಡೆಯಲಿರುವ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿದ್ದು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿಯಿಂದ ಬಾಲೆಹೊಸೂರು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ಮಹಾಶಕ್ತಿ ಕೇಂದ್ರ ಮುಖಂಡರು ಬಿಜೆಪಿಗೆ ಶಕ್ತಿ: ಪ್ರತಾಪಗೌಡ

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದ ಬಳಿಕ ಮಾತನಾಡಿ, ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಗುರಿ ನಮ್ಮದಾಗಬೇಕು, ಎದುರಾಳಿ ಮುಖಂಡರ ಪ್ರಭಾವ ಇರುವ ಬೂತ್ ಗಳಲ್ಲಿ ಬಿಜೆಪಿ ಲೀಡ್ ಮಾಡಿ ತೋರಿಸಬೇಕು. ಈ ನಿಟ್ಟಿನಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಕೆಲಸ ನಿರ್ವಹಿಸಬೇಕೆಂದು ಹೇಳಿದರು.

ತುರ್ತು ವಾಹನ ಸೇವೆ ಒದಗಿಸಿ ಜನರಿಂದ ಸೈ ಎನಿಸಿಕೊಂಡ ಗ್ರಾಪಂ ಸದಸ್ಯ ಜಹೀರ್

ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಜನಸಾಮಾನ್ಯರ ಬದುಕು ತೀರಾ ಸಂಕಷ್ಟಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸೇವಾ ಕಾರ್ಯಕ್ಕೆ ಅಣಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ, ಗ್ರಾಮದಲ್ಲಿ ಉಚಿತ ತುರ್ತು ಸೇವಾ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ.

ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.