ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ 31ರ ವರೆಗೆ ಲಾಕ್ ಡೌನ್ ಘೋಷಿಸಿದೆ.
ಈ ಸಂದರ್ಭದಲ್ಲಿ ಹಲವು ವಿನಾಯಿತಿಗಳನ್ನು ಘೋಷಿಸಲಾಗಿದೆ. ಶೀಘ್ರದಲ್ಲಿಯೇ ಲಾಕ್ಡೌ್ನ್ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ದೇಶದಲ್ಲಿ ಲಾಕ್ಡೌಸನ್ ಬೇಕು ಅಥವಾ ಬೇಡ ಎಂಬುದರ ಕುರಿತ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ ಪಶ್ಚಿಮ ಬಂಗಾಳ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ದೇಶದಲ್ಲಿ ಇದುವರೆಗೂ 4,56,183 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,83,022 ಸಕ್ರಿಯ ಕೇಸ್ ಗಳಿವೆ. ಭಾರತದಲ್ಲಿ ಡೆಡ್ಲಿ ವೈರಸ್ ಆಕ್ರಮಣಕ್ಕೆ ಒಟ್ಟು 14,476 ಜನ ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಕರ್ನಾಟಕದಲ್ಲಿ ಕೊರೊನಾ 10 ಸಾವಿರದ ಗಡಿ ದಾಟಿದ್ದು, 164 ಜನರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ ಎಷ್ಟು ಗೊತ್ತಾ?

ಅಮೆರಿಕಾ ರಾಷ್ಟ್ರದಲ್ಲಿ ವೈರಸ್ ನಿಯಂತ್ರಮಕ್ಕೆ ಬರುವ ಬೆಳವಣಿಗೆಗಳು ಕಂಡು ಬರುತ್ತಿದೆ ಎಂಬ ಭರವಸೆಗಳು ಜನರಲ್ಲಿ ಮೂಡುತ್ತಿರುವ ನಡುವಲ್ಲೇ ಇದೀಗ ಮತ್ತೆ ಅಮೆರಿಕಾದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ.

ಸಿಎಂ ಪರಿಹಾರ ನಿಧಿಗೆ ಕೆ.ಎಸ್.ಆರ್.ಟಿ.ಸಿ ಯಿಂದ 9.85 ಲಕ್ಷ ಸಹಾಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ.

ಕಂಡಕ್ಟರ್, ಡ್ರೈವರ್ ಗಳನ್ನು ಟಾರ್ಗೇಟ್ ಮಾಡಿದ್ರಾ ಡಿಪೋ ಮ್ಯಾನೇಜರ್..?

ಇದೀಗ ಡಿಪೋ ಮ್ಯಾನೇಜರ್ ಬಸಪ್ಪ ಪೂಜಾರ್ ಅವರ ವರ್ತನೆ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ನಿನ್ನೆ ಘಟನೆ ನಂತರ ಇದೀಗ ಸಿಬ್ಬಂಧಿಗಳನ್ನು ಡಿಪೋ ಮ್ಯಾನೇಜರ್ ಟಾರ್ಗೆಟ್ ಮಾಡಿದ್ದಾರೆಯೇ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ರೈತರ ಜೀವನದ ಮೇಲೆ ಬರೆ ಎಳೆದಂತಾಗುತ್ತದೆ: ಟಿ.ಈಶ್ವರ ಆರೋಪ

ಪ್ರಸ್ತುತ ರಾಷ್ಟçದಲ್ಲಿ ನಡೆದಿರುವ ರೈತ ಚಳುವಳಿ ಹಾಗು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡೆಯ ಕುರಿತು ಕಾಂಗ್ರೆಸ್ ಮುಖಂಡ ಅರಣ್ಯ ಕೈಗಾರಿಕೆ ನಿಗಮದ ಮಾಜಿ ಅಧ್ಯಕ್ಷ ಟಿ.ಈಶ್ವರ ಅವರೊಂದಿಗೆ ಉತ್ತರಪ್ರಭ ಪ್ರತಿನಿಧಿ ಕೆ.ಸದಾನಂದ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ..