ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ 31ರ ವರೆಗೆ ಲಾಕ್ ಡೌನ್ ಘೋಷಿಸಿದೆ.
ಈ ಸಂದರ್ಭದಲ್ಲಿ ಹಲವು ವಿನಾಯಿತಿಗಳನ್ನು ಘೋಷಿಸಲಾಗಿದೆ. ಶೀಘ್ರದಲ್ಲಿಯೇ ಲಾಕ್ಡೌ್ನ್ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ದೇಶದಲ್ಲಿ ಲಾಕ್ಡೌಸನ್ ಬೇಕು ಅಥವಾ ಬೇಡ ಎಂಬುದರ ಕುರಿತ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ ಪಶ್ಚಿಮ ಬಂಗಾಳ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ದೇಶದಲ್ಲಿ ಇದುವರೆಗೂ 4,56,183 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,83,022 ಸಕ್ರಿಯ ಕೇಸ್ ಗಳಿವೆ. ಭಾರತದಲ್ಲಿ ಡೆಡ್ಲಿ ವೈರಸ್ ಆಕ್ರಮಣಕ್ಕೆ ಒಟ್ಟು 14,476 ಜನ ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಕರ್ನಾಟಕದಲ್ಲಿ ಕೊರೊನಾ 10 ಸಾವಿರದ ಗಡಿ ದಾಟಿದ್ದು, 164 ಜನರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿದ್ಧರಾಮಯ್ಯ ಗೆ ಅಹಿಂದ ಮತದಾರರ ಬೆಂಬಲ

ಉತ್ತರಪ್ರಭ ಸುದ್ದಿ ಬಸವನಬಾಗೇವಾಡಿ: ಶಿವಾನಂದ ಪಾಟೀಲ ಎರಡೂ ಬಾರಿ ಬಸವನಬಾಗೇವಾಡಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಎರಡೂ ಬಾರಿ…

ಗುಲಾಬ ನಬಿ ಆಜಾದರ ನಿರ್ಣಯ ಕೋಮುವಾದಿ ಶಕ್ತಿಗೆ ಬಲ ತಂದಂತಾಗಿದೆ: ಎಚ್ ಕೆ ಪಾಟೀಲ

ಉತ್ತರಪ್ರಭಗದಗ: ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಎಂಬ ರ್ಯಾಲಿಯ ಮೂಲಕ ಕೋಮುವಾದಿ ಶಕ್ತಿಗಳಿಗೆ ಶಡ್ಡು ಹೋಡೆದು…

ಭಾರತ ಸೇರಿದಂತೆ ಅಭಿವೃದ್ಧಿ ಶೀಲ ರಾಷ್ಟ್ರಗಳಿಗೆ ಸಹಾಯ ಮಾಡಲು ಮುಂದಾದ ವಿಶ್ವ ಬ್ಯಾಂಕ್!

ವಿಶ್ವಸಂಸ್ಥೆ : ಕೊರೊನಾ ಆತಂಕದ ನಂತರ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ದೇಶಗಳಿಗೆ ವಿಶ್ವ ಬ್ಯಾಂಕ್ ಸಹಾಯಕ್ಕೆ ಮುಂದಾಗಿದೆ.

ರೂಪಾಂತರ ಕೊರೋನಾ ಹಿನ್ನೆಲೆ : ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಕೋವಿಡ್-19 ನ ರೂಪಾಂತರಗಳು ಪ್ರಸಾರವಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಅಂತಾರಾಷ್ಟ್ರೀಯ ಆಗಮನಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೋಮವಾರದಿಂದ ಮಾರ್ಗಸೂಚಿ ಜಾರಿಗೆ ಬರಲಿದೆ.