ಬೆಂಗಳೂರು: ಈಗಾಗಲೇ ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ವಿದ್ಯುತ್ ಇಲಾಖೆ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಬೆಸ್ಕಾಂ ವಿದ್ಯುತ್ ದರ ಹೆಚ್ಚಿಗೆ ಮಾಡಲು ಮುಂದಾಗಿದ್ದು ಜನರಿಗೆ ಸಂಕಷ್ಟದ ಬರೆ ಎಳೆದಂತಾಗಿದೆ. ಜುಲೈ1, 2020 ರಿಂದ ಡಿಸೆಂಬರ್ 31, 2020ರ ವರೆಗೆ ಬಿಲ್ಲಿಂಗ್ ಅವಧಿಗೆ ನಿಗದಿಪಡಿಸಿದ ಇಂಧನ ವ್ಯತ್ಯಾಸವನ್ನು ಪ್ರತಿ ಯುನಿಟ್ ಗೆ 12 ಪೈಸೆ ಇಂಧನ ವ್ಯತ್ಯಾಸ ದರವನ್ನಾಗಿ ಪಡೆಯಲು ಬೆಸ್ಕಾಂ ಅನುಮೋದನೆ ನೀಡಿದೆ.

ಈಗಾಗಲೇ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬೆಸ್ಕಾಂ ಜನರು ಕೊರೊನಾದ ಭಯದಲ್ಲಿರುವಾಗ ವಿದ್ಯುತ್ ದರ ಹೆಚ್ಚಳವನ್ನು ಸದ್ದಿಲ್ಲದೇ ಮಾಡಲು ಮುಂದಾಗಿದೆ. ಇತ್ತಿಚೆಗಷ್ಟೆ ರಾಜ್ಯಾದ್ಯಂತ ಹೆಚ್ಚಿಗೆ ಬಿಲ್ ನೀಡುವ ಮೂಲಕ ವಿದ್ಯುತ್ ಇಲಾಖೆ ವಿವಾದಕ್ಕೆ ಕಾರಣವಾಗಿತ್ತು. ಈಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡಿದ್ದು ಜನರನ್ನು ಆತಂಕಕ್ಕೀಡು ಮಾಡಿದೆ. ಬೆಸ್ಕಾಂ ಮಾದರಿಯನ್ನೆ ಉಳಿದ ನಿಗಮಗಳು ವಿದ್ಯುತ್ ದರ ಹೆಚ್ಚಳ ಮಾಡುವ ಸಾದ್ಯತೆ ಇದ್ದು ಈ ಬಗ್ಗೆ ಜನರಿಗೆ ಆತಂಕ ನಿರ್ಮಾಣವಾಗಿದ್ದು, ಇದಕ್ಕೆ ವಿರೋಧ ಕೂಡ ವ್ಯಕ್ತವಾಗುತ್ತಿದೆ.   

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಯಾವ ಗ್ರಾಮ ಪಂಚಾಯತಿಗೆ ಯಾರು ಆಡಳಿತಾಧಿಕಾರಿ

ಗದಗ:ಈಗಾಗಲೇ ಕೊರೊನಾ ಹಿನ್ನೆಲೆ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಪ್ರಕ್ರಿಯೇಯನ್ನು ಸರ್ಕಾರ ಮುಂದೂಡಿದೆ. ಆದರೆ…

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…

ಪಟಾಕಿ ನಿಷೇಧ ಆದೇಶ ಹಿಂಪಡೆದ ಸಿಎಂ: ಹಸಿರು ಪಟಾಕಿಗೆ ಅನುಮತಿ ನೀಡಿದ ಬಿಎಸ್ವೈ

ದೀಪಾವಳಿ ಹಿನ್ನೆಲೆ ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ನಿಷೇಧಿಸುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಸಾರ್ವಜನಿಕರ ಒತ್ತಡಕ್ಕೆ ಮಣಿದ ಯಡಿಯೂರಪ್ಪ “ಹಸಿರು ಪಟಾಕಿ ”ಮಾರಾಟ ಮತ್ತು ಸಿಡಿಸಲು ಅವಕಾಶ ನೀಡಿದ್ದಾರೆ.

ಮೋದಿ ಗೇಲಿ ಮಾಡಲು ಹೋಗಿ ಬೇಸ್ತು ಬಿದ್ದ ರಾಹುಲ್

ದೆಹಲಿ: ಚೀನಾ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಡುವೆ ಭಾರೀ ಕಂದಕ ಏರ್ಪಟ್ಟಿದೆ.…