ಬೆಂಗಳೂರು: ಈಗಾಗಲೇ ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ವಿದ್ಯುತ್ ಇಲಾಖೆ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಬೆಸ್ಕಾಂ ವಿದ್ಯುತ್ ದರ ಹೆಚ್ಚಿಗೆ ಮಾಡಲು ಮುಂದಾಗಿದ್ದು ಜನರಿಗೆ ಸಂಕಷ್ಟದ ಬರೆ ಎಳೆದಂತಾಗಿದೆ. ಜುಲೈ1, 2020 ರಿಂದ ಡಿಸೆಂಬರ್ 31, 2020ರ ವರೆಗೆ ಬಿಲ್ಲಿಂಗ್ ಅವಧಿಗೆ ನಿಗದಿಪಡಿಸಿದ ಇಂಧನ ವ್ಯತ್ಯಾಸವನ್ನು ಪ್ರತಿ ಯುನಿಟ್ ಗೆ 12 ಪೈಸೆ ಇಂಧನ ವ್ಯತ್ಯಾಸ ದರವನ್ನಾಗಿ ಪಡೆಯಲು ಬೆಸ್ಕಾಂ ಅನುಮೋದನೆ ನೀಡಿದೆ.

ಈಗಾಗಲೇ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬೆಸ್ಕಾಂ ಜನರು ಕೊರೊನಾದ ಭಯದಲ್ಲಿರುವಾಗ ವಿದ್ಯುತ್ ದರ ಹೆಚ್ಚಳವನ್ನು ಸದ್ದಿಲ್ಲದೇ ಮಾಡಲು ಮುಂದಾಗಿದೆ. ಇತ್ತಿಚೆಗಷ್ಟೆ ರಾಜ್ಯಾದ್ಯಂತ ಹೆಚ್ಚಿಗೆ ಬಿಲ್ ನೀಡುವ ಮೂಲಕ ವಿದ್ಯುತ್ ಇಲಾಖೆ ವಿವಾದಕ್ಕೆ ಕಾರಣವಾಗಿತ್ತು. ಈಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡಿದ್ದು ಜನರನ್ನು ಆತಂಕಕ್ಕೀಡು ಮಾಡಿದೆ. ಬೆಸ್ಕಾಂ ಮಾದರಿಯನ್ನೆ ಉಳಿದ ನಿಗಮಗಳು ವಿದ್ಯುತ್ ದರ ಹೆಚ್ಚಳ ಮಾಡುವ ಸಾದ್ಯತೆ ಇದ್ದು ಈ ಬಗ್ಗೆ ಜನರಿಗೆ ಆತಂಕ ನಿರ್ಮಾಣವಾಗಿದ್ದು, ಇದಕ್ಕೆ ವಿರೋಧ ಕೂಡ ವ್ಯಕ್ತವಾಗುತ್ತಿದೆ.   

Leave a Reply

Your email address will not be published. Required fields are marked *

You May Also Like

ದುಡ್ಡಿದ್ದವರು ಮಾತ್ರ ಕುಡಿತಾರೆ ಅಂದ್ರು ಅಬಕಾರಿ ಸಚಿವರು

ನಮ್ಮವು ಖರ್ಚು ವೆಚ್ಚ ಇರುತ್ತದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಟ್ಯಾಕ್ಸ್ ಹೆಚ್ಚಳ ಮಾಡಲಾಗಿದೆ. ಈ ಮಾದರಿಯನ್ನು ಅನುಸರಿಸಿಯೇ ನಮ್ಮ ರಾಜ್ಯದಲ್ಲೂ ಟ್ಯಾಕ್ಸ್ ಹೆಚ್ಚಿಸಲಾಗಿದೆ ಅಂತಾರೆ ಅಬಕಾರಿ ಮಿನಿಸ್ಟರ್.

ಗದಗ ಜಿ.ಪಂ. ಪ್ರಭಾರ ಅಧ್ಯಕ್ಷರಾಗಿ ಮಲ್ಲವ್ವ ಬಿಚ್ಚೂರ

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರು, ಇಂದು ಗದಗ ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರ ಅಧಿಕಾರ ಸ್ವೀಕರಿಸಿದರು.

ಆಗಸ್ಟ್ 15ಕ್ಕೆ ದೇಶಕ್ಕೆ ಕೊರೋನಾ ಮೆಡಿಸಿನ್ ಸಿಗುತ್ತಾ?

ಕೊರೋನಾ ಲಸಿಕೆ ಉತ್ಪಾದನೆ ಹೇಗೆ? ದೆಹಲಿ: ಜುಲೈ 3 ಶುಕ್ರವಾರದಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್…

ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ : ಸಚಿವ ಬಿ.ಸಿ.ಪಾಟೀಲ್

ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.