ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇಂದು ಮುಂದಿನ ನಡೆ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಬೆಂಗಳೂರಿನಲ್ಲಿ ಕೊರೊನಾ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಜೊತೆಗೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಬೆಂಗಳೂರಿಗರಿಗೆ ಮತ್ತೊಂದು ಸೀಲ್ ಡೌನ್ ಬೇಡವೆಂದಾದಲ್ಲಿ, ಜನ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಜರ್ ಬಳಸಬೇಕು ಎಂದು ನಾನು ಜನರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.