ಮಗನಿಗೆ ‌ಪರೀಕ್ಷೆಗೆ ಕರೆದೊಯ್ಯುವಾಗ ಅಪಘಾತ: ಸ್ಥಳದಲ್ಲೆ ತಂದೆ ಸಾವು.!

ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯ್ಯಾಪುರ ಗ್ರಾಮದ ಬಳಿ ನಡೆದಿದೆ. ನಾಗರೆಡ್ಡಿ ಮೀಯ್ಯಾಪು (52) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಮಿಯ್ಯಾಪುರ ಗ್ರಾಮದಿಂದ ಗಬ್ಬೂರಿಗೆ ಎಸ್.ಎಸ್. ಎಲ್.ಸಿ ಪರೀಕ್ಷೆ ಬರೆಯಲು ಮಗನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದರು, ಈ ವೇಳೆ ಹಸು ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಬ್ಬೂರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Exit mobile version