ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ದಿನೇ ದಿನೇ ನಗರದಲ್ಲಿ ಸೋಂಕು ಹೆಚ್ಚಾಗುತ್ತಿದೆ. ಸದ್ಯ ನಗರದಲ್ಲಿ ಸಮುದಾಯದ ಮಟ್ಟದಲ್ಲಿ ಸ್ಫೋಟಗೊಂಡಿದೆ. ಹೊಸ ಹೊಸ ಪ್ರದೇಶಗಳಿಗೆ ತನ್ನ ವ್ಯಾಪ್ತಿ ಹೆಚ್ಚಿಸುತ್ತಿದೆ. ಸದ್ಯ ನಟ ರವಿಶಂಕರ್ ಅವರ ಮನೆಯ ಮುಂದಿನ ಮನೆಗೆ ಬಂದಿದೆ. ಹೀಗಾಗಿ ಅವರಲ್ಲಿ ಆತಂಕ ಮನೆ ಮಾಡಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ರವಿ ಶಂಕರ್, ನನ್ನ ಅಪಾರ್ಟ್ಮೆಂರಟ್ ನಲ್ಲಿ ನನ್ನ ಎದುರು ಮನೆಗೆ ಸೋಂಕು ವಕ್ಕರಿಸಿದೆ. ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು. ಕ್ವಾರಂಟೈನ್ ಮಾಡಿದ್ದಾರೆ ಬಾಗಿಲನ್ನು 14 ದಿನ ತೆರೆಯುವಂತಿಲ್ಲ. ಸುದೀಪ, ಗಣಪ, ಸೃಜನ್, ಮಕ್ಕಳನ್ನು ಕರೆದುಕೊಂಡು ನಮ್ಮನೆಗೆ ಬಾ ಅಂದರು. ಗೆಳೆತನ ಎಂದರೆ ಇದೆ ಅಲ್ಲವೆ. ನಮ್ಮ ಬಗ್ಗೆ ವಿಚಾರಿಸಿದ ಸಂತೋಷ್ ಆನಂದ್, ರಘುರಾಮ್ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೊರೊನಾ ಸೋಂಕು ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಈ ವಿಚಾರವಾಗಿ ಬುಧವಾರವಷ್ಟೇ ಟ್ವೀಟ್ ಮಾಡಿದ್ದ ವಿಜಯಲಕ್ಷ್ಮಿ, ನನಗೆ ಕೊರೊನಾ ಸೋಂಕು ಇಲ್ಲ. ಇದು ಸುಳ್ಳು ಸುದ್ದಿ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

You May Also Like

ಮುಂಡರಗಿ ತಾಲೂಕಿನ ಕೆಲ ಸರ್ಕಾರಿ ಆಸ್ಪತ್ರೆಗೂ ಕರೊನಾ ಭೀತಿ..!

ಜಿಲ್ಲೆಯ ಮುಂಡರಗಿ ತಾಲೂಕಾ ಆಸ್ಪತ್ರೆ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಶಂಕೆ ವ್ಯಕ್ತವಾಗಿದೆ. ಶಂಕೆ ಹಿನ್ನಲೆಯಲ್ಲಿ ಮುಂಡರಗಿ ತಾಲೂಕಾ ಆಸ್ಪತ್ರೆ ಹಾಗೂ ಡಂಬಳ ಆರೋಗ್ಯ ಕೇಂದ್ರದಲ್ಲಿ ಸೈನಿಟೈಜರ್ ಮಾಡಲಾಗಿದೆ.

ಕೊರೊನಾ ಭಯ – ಹಲವೆಡೆ ಸ್ವಯಂ ಪ್ರೇರಿತ ಬಂದ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ…

ಮಹಿಳಾ ವಿಶ್ವಕಪ್ ಆತಿಥ್ಯ ವಹಿಸಿದ ಭಾರತ!

2022 ರ ಮಹಿಳಾ ಏಷ್ಯನ್ ಕಪ್ ಆತಿಥ್ಯ ಭಾರತಕ್ಕೆ ಲಭಿಸಿದೆ. 1979ರ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ ಮಹತ್ವದ ಫುಟ್ಬಾಲ್ ಕ್ರಿಡಾಕೂಟ ನಡೆಯಲಿದೆ.

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.