ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ದಿನೇ ದಿನೇ ನಗರದಲ್ಲಿ ಸೋಂಕು ಹೆಚ್ಚಾಗುತ್ತಿದೆ. ಸದ್ಯ ನಗರದಲ್ಲಿ ಸಮುದಾಯದ ಮಟ್ಟದಲ್ಲಿ ಸ್ಫೋಟಗೊಂಡಿದೆ. ಹೊಸ ಹೊಸ ಪ್ರದೇಶಗಳಿಗೆ ತನ್ನ ವ್ಯಾಪ್ತಿ ಹೆಚ್ಚಿಸುತ್ತಿದೆ. ಸದ್ಯ ನಟ ರವಿಶಂಕರ್ ಅವರ ಮನೆಯ ಮುಂದಿನ ಮನೆಗೆ ಬಂದಿದೆ. ಹೀಗಾಗಿ ಅವರಲ್ಲಿ ಆತಂಕ ಮನೆ ಮಾಡಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ರವಿ ಶಂಕರ್, ನನ್ನ ಅಪಾರ್ಟ್ಮೆಂರಟ್ ನಲ್ಲಿ ನನ್ನ ಎದುರು ಮನೆಗೆ ಸೋಂಕು ವಕ್ಕರಿಸಿದೆ. ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು. ಕ್ವಾರಂಟೈನ್ ಮಾಡಿದ್ದಾರೆ ಬಾಗಿಲನ್ನು 14 ದಿನ ತೆರೆಯುವಂತಿಲ್ಲ. ಸುದೀಪ, ಗಣಪ, ಸೃಜನ್, ಮಕ್ಕಳನ್ನು ಕರೆದುಕೊಂಡು ನಮ್ಮನೆಗೆ ಬಾ ಅಂದರು. ಗೆಳೆತನ ಎಂದರೆ ಇದೆ ಅಲ್ಲವೆ. ನಮ್ಮ ಬಗ್ಗೆ ವಿಚಾರಿಸಿದ ಸಂತೋಷ್ ಆನಂದ್, ರಘುರಾಮ್ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೊರೊನಾ ಸೋಂಕು ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಈ ವಿಚಾರವಾಗಿ ಬುಧವಾರವಷ್ಟೇ ಟ್ವೀಟ್ ಮಾಡಿದ್ದ ವಿಜಯಲಕ್ಷ್ಮಿ, ನನಗೆ ಕೊರೊನಾ ಸೋಂಕು ಇಲ್ಲ. ಇದು ಸುಳ್ಳು ಸುದ್ದಿ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

You May Also Like

ಕೊರೊನಾ ದುಷ್ಪರಿಣಾಮ: ನಗರಗಳ 14 ಕೋಟಿ ಜನರ ಬದುಕು ದುಸ್ತರ

ದೆಹಲಿ: ದೇಶಾದ್ಯಂತ ಕೊರೊನಾ ಕಾರಣದಿಂದಾಗಿ ಲಾಕ್ಡೌನ್ ದುಷ್ಪರಿಣಾಮ ನಗರ ಪ್ರದೇಶಗಳಲ್ಲಿ ವಾಸವಾಗಿರುವ ನಾಗರಿಕರ ಮೇಲೆ ಹೆಚ್ಚಾಗಿದೆ.…

ಅಬ್ಬಾ…! ಮಹಾರಾಷ್ಟ್ರದಲ್ಲಿ ಎಷ್ಟು ಜನ ಪೊಲೀಸರಿಗೆ ಕೊರೊನಾ ಬಂದಿದೆ ಗೊತ್ತಾ?

ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು…

ಸಾವರಕರ್ ಬದಲಾಗಿ ರಾಹುಲ್, ಸೋನಿಯಾಗಾಂಧಿ ಹೆಸರಿಡಬೇಕಾ?: ಸಿ.ಸಿ.ಪಾಟೀಲ್

ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ,…

ಗದಗ ಜಿಮ್ಸ್ ಯಡವಟ್ಟು : ಕೊರೊನಾ ಸೋಂಕಿತರ ಲೀಸ್ಟ್ ಲೀಕ್ ಔಟ್…?

ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.