ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ದಿನೇ ದಿನೇ ನಗರದಲ್ಲಿ ಸೋಂಕು ಹೆಚ್ಚಾಗುತ್ತಿದೆ. ಸದ್ಯ ನಗರದಲ್ಲಿ ಸಮುದಾಯದ ಮಟ್ಟದಲ್ಲಿ ಸ್ಫೋಟಗೊಂಡಿದೆ. ಹೊಸ ಹೊಸ ಪ್ರದೇಶಗಳಿಗೆ ತನ್ನ ವ್ಯಾಪ್ತಿ ಹೆಚ್ಚಿಸುತ್ತಿದೆ. ಸದ್ಯ ನಟ ರವಿಶಂಕರ್ ಅವರ ಮನೆಯ ಮುಂದಿನ ಮನೆಗೆ ಬಂದಿದೆ. ಹೀಗಾಗಿ ಅವರಲ್ಲಿ ಆತಂಕ ಮನೆ ಮಾಡಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ರವಿ ಶಂಕರ್, ನನ್ನ ಅಪಾರ್ಟ್ಮೆಂರಟ್ ನಲ್ಲಿ ನನ್ನ ಎದುರು ಮನೆಗೆ ಸೋಂಕು ವಕ್ಕರಿಸಿದೆ. ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು. ಕ್ವಾರಂಟೈನ್ ಮಾಡಿದ್ದಾರೆ ಬಾಗಿಲನ್ನು 14 ದಿನ ತೆರೆಯುವಂತಿಲ್ಲ. ಸುದೀಪ, ಗಣಪ, ಸೃಜನ್, ಮಕ್ಕಳನ್ನು ಕರೆದುಕೊಂಡು ನಮ್ಮನೆಗೆ ಬಾ ಅಂದರು. ಗೆಳೆತನ ಎಂದರೆ ಇದೆ ಅಲ್ಲವೆ. ನಮ್ಮ ಬಗ್ಗೆ ವಿಚಾರಿಸಿದ ಸಂತೋಷ್ ಆನಂದ್, ರಘುರಾಮ್ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೊರೊನಾ ಸೋಂಕು ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಈ ವಿಚಾರವಾಗಿ ಬುಧವಾರವಷ್ಟೇ ಟ್ವೀಟ್ ಮಾಡಿದ್ದ ವಿಜಯಲಕ್ಷ್ಮಿ, ನನಗೆ ಕೊರೊನಾ ಸೋಂಕು ಇಲ್ಲ. ಇದು ಸುಳ್ಳು ಸುದ್ದಿ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಹಳ್ಳಿ ಗಳಲ್ಲಿ ಕೊರೊನಾ ಭಯ..!: ಗುಟಕಾ, ಸಿಗರೇಟ್ ಮಾರಿದ್ರೆ ದಂಡ ಗ್ಯಾರಂಟಿ..!

ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ.…

ರಾಜ್ಯದಲ್ಲಿಂದು 176 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7000…

ಪತಿಯ ಮೇಲೆಯೇ ಮಟನ್ ಸಾಂಬಾರ್ ಎರಚಿದ ಪತ್ನಿ!

ತುಮಕೂರು: ಪತಿಯ ಮೇಲೆ ಪತ್ನಿಯೇ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಿಪಟೂರು…

ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ!

ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ…