ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ದಿನೇ ದಿನೇ ನಗರದಲ್ಲಿ ಸೋಂಕು ಹೆಚ್ಚಾಗುತ್ತಿದೆ. ಸದ್ಯ ನಗರದಲ್ಲಿ ಸಮುದಾಯದ ಮಟ್ಟದಲ್ಲಿ ಸ್ಫೋಟಗೊಂಡಿದೆ. ಹೊಸ ಹೊಸ ಪ್ರದೇಶಗಳಿಗೆ ತನ್ನ ವ್ಯಾಪ್ತಿ ಹೆಚ್ಚಿಸುತ್ತಿದೆ. ಸದ್ಯ ನಟ ರವಿಶಂಕರ್ ಅವರ ಮನೆಯ ಮುಂದಿನ ಮನೆಗೆ ಬಂದಿದೆ. ಹೀಗಾಗಿ ಅವರಲ್ಲಿ ಆತಂಕ ಮನೆ ಮಾಡಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ರವಿ ಶಂಕರ್, ನನ್ನ ಅಪಾರ್ಟ್ಮೆಂರಟ್ ನಲ್ಲಿ ನನ್ನ ಎದುರು ಮನೆಗೆ ಸೋಂಕು ವಕ್ಕರಿಸಿದೆ. ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು. ಕ್ವಾರಂಟೈನ್ ಮಾಡಿದ್ದಾರೆ ಬಾಗಿಲನ್ನು 14 ದಿನ ತೆರೆಯುವಂತಿಲ್ಲ. ಸುದೀಪ, ಗಣಪ, ಸೃಜನ್, ಮಕ್ಕಳನ್ನು ಕರೆದುಕೊಂಡು ನಮ್ಮನೆಗೆ ಬಾ ಅಂದರು. ಗೆಳೆತನ ಎಂದರೆ ಇದೆ ಅಲ್ಲವೆ. ನಮ್ಮ ಬಗ್ಗೆ ವಿಚಾರಿಸಿದ ಸಂತೋಷ್ ಆನಂದ್, ರಘುರಾಮ್ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೊರೊನಾ ಸೋಂಕು ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಈ ವಿಚಾರವಾಗಿ ಬುಧವಾರವಷ್ಟೇ ಟ್ವೀಟ್ ಮಾಡಿದ್ದ ವಿಜಯಲಕ್ಷ್ಮಿ, ನನಗೆ ಕೊರೊನಾ ಸೋಂಕು ಇಲ್ಲ. ಇದು ಸುಳ್ಳು ಸುದ್ದಿ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

You May Also Like

ಮಾಜಿ ಪಿಎಂ ದೇವೇಗೌಡರಿಗೆ ಪ್ರಶಂಸಾ ಪತ್ರ ಕಳುಹಿಸಿದ ಹಾಲಿ ಪಿಎಂ

ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…

ನಾಳೆ ಗದಗನಲ್ಲಿ ವಿದ್ಯುತ್ ವ್ಯತ್ಯಯ

ಗದಗ: ಬೆಟಗೇರಿ ಶಾಖೆಯಲ್ಲಿ ಜುಲೈ 07 ರಂದು 11 ಕೆ.ವ್ಹಿ. ಮಾರ್ಗದ ತುರ್ತು ನಿರ್ವಹಣಾ ಕೆಲಸ…

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…