ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸಚಿವರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವತ್ತು ನಾಳೆ ಕೋವಿಡ್ 19 ವಿಚಾರವಾಗಿ ಸರಣಿ ಸಭೆ ನಡೆಸಲಿದ್ದೇವೆ. ನಾಳೆ ಸರ್ವಪಕ್ಷಗಳ ಹಾಗೂ ಬೆಂಗಳೂರು ಶಾಸಕರ ಅಭಿಪ್ರಾಯ ಪಡೆಯೊಣ. ಕೋವಿಡ್ 19 ವಿಚಾರವಾಗಿ ತಜ್ಞರಿಂದ ಅಂತಿಮ ವರದಿ ಕೂಡ ಬರಬೇಕಿದೆ. ಹೀಗಾಗಿ ಈಗಲೇ ಲಾಕ್ ಡೌನ್ ಮಾಡುವ ನಿರ್ಧಾರ ಮಾಡಲು ಸಾಧ್ಯವಿಲ್ಲ. ಎಸ್.ಎಸ್ ಎಲ್.ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಲಾಕ್ ಡೌನ್ ವದಂತಿಗಳಿಂದ ವಿದ್ಯಾರ್ಥಿಗಳಲ್ಲಿ, ಪಾಲಕರಲ್ಲ ಆತಂಕ ಸೃಷ್ಟಿಯಾಗುತ್ತೆ ಎಂದು ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವ

ಖಾಸಗಿ ಶಿಕ್ಷಣ ಸಂಸ್ಥೆಗಳ ವರ್ತನೆಯಿಂದ ಆತಂಕಗೊಂಡಿರುವ ಶಿಕ್ಷಣ ಇಲಾಖೆ, ಇದೀಗ ಮಕ್ಕಳ ಹಿತ ಕಾಪಾಡಲು ಮುಂದಾಗಿದೆ. ಹೀಗಾಗಿ ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಶಿವಾಜಿ ಮಹಾರಾಜರ ಜಯಂತಿ ಆಚರಿಸಲು ಷರತ್ತು ಬದ್ದ ಅನುಮತಿ

ಉತ್ತರಪ್ರಭ ಗದಗ:ದಿನಾಂಕ: 19.02.2022 ರಂದು ಶಿವಾಜಿ ಮಹಾರಾಜರ ಜಯಂತಿಯನ್ನು ಮುನ್ಸಿಪಲ್ ಹೈ-ಸ್ಕೂಲ್ ಮೈದಾನದಲ್ಲಿ ಆಚರಿಸಲು ಷರತ್ತು…

ಮನೆಯಲ್ಲಿಯೇ ಯಶ್ : ಜ್ಯೂನೀಯರ್ ರಾಧಿಕಾ ಫುಲ್ ಖುಷ್..!

ಲಾಕ್​ಡೌನ್​ನಿಂದಾಗಿ ಯಶ್​ ಮನೆಯಲ್ಲಿಯೇ ಉಳಿಯುವಂತಾಗಿದ್ದು, ಮಕ್ಕಳ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಇದರಿಂದಾಗಿ ಜೂನಿಯರ್‌ ರಾಧಿಕಾ ಫುಲ್ ಖುಷಿಯಾಗಿದ್ದಾರೆ.

ಪಟ್ಟಣ ಪಂಚಾಯತಿ ಆದೇಶಕ್ಕೂ ಕಿಮ್ಮತ್ತು ನೀಡದ ಹೆಸ್ಕಾಂ…!

ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ.