ಮುಂಡರಗಿ: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ. ಸಿದ್ದಪ್ಪ , ಈರಣ್ಣ ಹಾಗೂ ಮೈಲಾರಿ ಅಪಘಾತಕ್ಕೀಡಾದ ವಿದ್ಯಾರ್ಥಿಗಳು.
ಕಲಕೇರಿ‌ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ಬೈಕ್ ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬೆಳ್ಳಟ್ಟಿಯಿಂದ ಮುಂಡರಗಿ ಮಾರ್ಗವಾಗಿ ಬರುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೂ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ಗೆ ಕಳಿಸಲಾಗಿದೆ. ಮುಂಡರಗಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ವಿಧಾನಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯೊಂದಿಗೆ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಿದೆ.

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…

ಲಕ್ಷ್ಮೇಶ್ವರ: ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

ಲಕ್ಷ್ಮೇಶ್ವರ: ಪಟ್ಟಣದ ಕರೇಗೋರಿ ಆಶ್ರಯ ಕಾಲೊನಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ…