ಮುಂಡರಗಿ: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ. ಸಿದ್ದಪ್ಪ , ಈರಣ್ಣ ಹಾಗೂ ಮೈಲಾರಿ ಅಪಘಾತಕ್ಕೀಡಾದ ವಿದ್ಯಾರ್ಥಿಗಳು.
ಕಲಕೇರಿ‌ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ಬೈಕ್ ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬೆಳ್ಳಟ್ಟಿಯಿಂದ ಮುಂಡರಗಿ ಮಾರ್ಗವಾಗಿ ಬರುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೂ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ಗೆ ಕಳಿಸಲಾಗಿದೆ. ಮುಂಡರಗಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ವಿಜಯನಗರ ಸಾಮ್ರಾಜ್ಯದ ಗತ ವೈಭವ ಬಿಂಬಿಸುವ ಹಂಪಿ ಉತ್ಸವ ಈ ಬಾರಿ ಹೇಗಿರಲಿದೆ?

ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ.

ಯುವರಾಜ್ ಸಿಂಗ್ ಗೆ ಮೋಸ ಮಾಡಿದವರು ಯಾರು?

ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಜನ ಚುರಿ ಹಾಕಿದ್ದಾರೆ ಎಂದು ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದಾರೆ. ಹಾಗಾದ್ರೆ ಯುವಿ ಬೆನ್ನಿಗೆ ಚೀರಿಹಾಕಿದವರು ಯಾರು ಎನ್ನುವುದೇ ಇಲ್ಲಿ ಮುಖ್ಯ ಪ್ರಶ್ನೆ.

ಗದಗ ಜಿಲ್ಲೆಯಲ್ಲಿಂದು 61 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 943…

ಗದಗ ಜಿಲ್ಲೆಯಲ್ಲಿ 73 ಪ್ರಕರಣ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ದಿ. 28 ರಂದು ಕೋವಿಡ್-19 ಸೋಂಕಿನ ಒಟ್ಟು 73 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.