ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸಚಿವರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವತ್ತು ನಾಳೆ ಕೋವಿಡ್ 19 ವಿಚಾರವಾಗಿ ಸರಣಿ ಸಭೆ ನಡೆಸಲಿದ್ದೇವೆ. ನಾಳೆ ಸರ್ವಪಕ್ಷಗಳ ಹಾಗೂ ಬೆಂಗಳೂರು ಶಾಸಕರ ಅಭಿಪ್ರಾಯ ಪಡೆಯೊಣ. ಕೋವಿಡ್ 19 ವಿಚಾರವಾಗಿ ತಜ್ಞರಿಂದ ಅಂತಿಮ ವರದಿ ಕೂಡ ಬರಬೇಕಿದೆ. ಹೀಗಾಗಿ ಈಗಲೇ ಲಾಕ್ ಡೌನ್ ಮಾಡುವ ನಿರ್ಧಾರ ಮಾಡಲು ಸಾಧ್ಯವಿಲ್ಲ .
ಎಸ್.ಎಸ್ ಎಲ್.ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಲಾಕ್ ಡೌನ್ ವದಂತಿಗಳಿಂದ ವಿದ್ಯಾರ್ಥಿಗಳಲ್ಲಿ, ಪಾಲಕರಲ್ಲ ಆತಂಕ ಸೃಷ್ಟಿಯಾಗುತ್ತೆ ಎಂದು ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ.