ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಸಂಸ್ಥೆ, ವೈದ್ಯಕೀಯ, ಕೈಗಾರಿಕೆ ಹಾಗೂ ವ್ಯವಸಾಯ ಮೊದಲಾದ ಚಟುವಟಿಕೆಗಳು ನಡೆಸಲು ಖಾಸಗಿಯವರಿಗೆ ನೀಡಿರುವ ಸರ್ಕಾರಿ ಜಮೀನನ್ನು ಶಾಶ್ವತವಾಗಿ ಅವರಿಗೆ ಮಾರಾಟ ಮಾಡುವ ನಿರ್ಧಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಖಾಸಗಿ ಕಂಪನಿಗಳಿಗೆ, ವ್ಯಕ್ತಿಗಳಿಗೆ ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಂಜೂರು ಮಾಡಲಾದ ಉದ್ದೇಶಗಳಿಗೆ ಜಮೀನನ್ನು ಬಳಸದವರಿಂದ ಜಮೀನನ್ನು ಹಿಂಪಡೆಯುವುದಾಗಿ ನಿಯಮ ರೂಪಿಸಲಾಗಿದೆ. ಜಮೀನು ಪಡೆದುಕೊಂಡ ಉದ್ದೇಶಕ್ಕೆ ಬಳಸುವವರಿಗೆ ಜಮೀನಿನ ಮೌಲ್ಯ ಪಡೆದು ಅವರ ಹೆಸರಿಗೆ ವರ್ಗಾಯಿಸಲು ಅವಕಾಶ ನೀಡಲಾಗಿದೆ.
ಇದರಿಂದ ಪದೇ ಪದೇ ನವೀಕರಣಗೊಳಿಸುವ ಕೆಲಸ ಕಡಿಮೆಯಾಗುತ್ತದೆ. ಹಾಗಾಗಿ ಅವರಿಗೆ ಶಾಶ್ವತವಾಗಿ ನೀಡುವ ಯೋಜನೆ ರೂಪಿಸಲಾಗಿದೆ. ಉದ್ದೇಶಿತ ಕಾರ್ಯಗಳಿಗೆ ಬಳಸದೆ ಇದ್ದರೆ ಮರು ಪಡೆಯುವ ಲೀಸ್‌ ಅಗ್ರಿಮೆಂಟ್‌ ಅನ್ನು ಹಾಗೆಯೇ ಉಳಿಸಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಕರವೇ ಮನವಿ

ಸ್ಥಳೀಯ ಪಪಂ ವ್ಯಾಪ್ತಿಯಲ್ಲಿ ಕೇವಲ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪಂಚಾಯ್ತಿಯ ಜನಸಂಖ್ಯೆಗನುಗುಣವಾಗಿ 4-5 ಶುದ್ದ ಕುಡಿಯುವ ನೀರಿನ ಘಟಕಗಳು ಅವಶ್ಯಕತೆ ಇದೆ. ಅವುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರವೇ ವತಿಯಿಂದ ಶುಕ್ರವಾರ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಅರುಣಕುಮಾರ ಮ ನರಗುಂದ. ಇವರು ವೃತ್ತಿಯಲ್ಲಿ ಹಿರೇಕೆರೂರಿನಲ್ಲಿ ನ್ಯಾಯಾಂಗ ಇಲಾಖೆಯ ನೌಕರ. ವೃತ್ತಿ ನ್ಯಾಯಾಂಗ ಇಲಾಖೆ ಆದರೆ ಸಾಹಿತ್ಯ ಕೃಷಿ ಇವರ ಪ್ರವೃತ್ತಿ.

ಪುರಾಣ ಪ್ರವಚನ ಪ್ರಾರಂಭೋತ್ಸವ ಆಧ್ಯಾತ್ಮಿಕ ಜೀವನ ಚೈತ್ರವೇ ನವೋಲ್ಲಾಸಕ್ಕೆ ದಾರಿ- ರುದ್ರಮುನಿ ಶಿವಾಚಾರ್ಯ

ಉತ್ತರಪ್ರಭ ಸುದ್ದಿಆಲಮಟ್ಟಿ: ಧಾಮೀ೯ಕ ಪ್ರವಚನಗಳು ಆಲಿಸುವುದರಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಗೊಳ್ಳುತ್ತದೆ. ಒಳ್ಳೆಯ ವಿಚಾರಗಳು ಶ್ರವಣಗಳಿಗೆ…

ಮನೆಯಲ್ಲಿಯೇ ಕುಳಿತ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಬೊಜ್ಜು ಸಮಸ್ಯೆ!

ಲಾಕ್ ಡೌನ್ ನಿಂದಾಗಿ ಸದ್ಯ ಮಕ್ಕಳು ಮನೆಯಲ್ಲಿಯೇ ತಮ್ಮ ಬಾಲ್ಯ ಕಳೆಯುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.