ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಸಂಸ್ಥೆ, ವೈದ್ಯಕೀಯ, ಕೈಗಾರಿಕೆ ಹಾಗೂ ವ್ಯವಸಾಯ ಮೊದಲಾದ ಚಟುವಟಿಕೆಗಳು ನಡೆಸಲು ಖಾಸಗಿಯವರಿಗೆ ನೀಡಿರುವ ಸರ್ಕಾರಿ ಜಮೀನನ್ನು ಶಾಶ್ವತವಾಗಿ ಅವರಿಗೆ ಮಾರಾಟ ಮಾಡುವ ನಿರ್ಧಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಖಾಸಗಿ ಕಂಪನಿಗಳಿಗೆ, ವ್ಯಕ್ತಿಗಳಿಗೆ ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಂಜೂರು ಮಾಡಲಾದ ಉದ್ದೇಶಗಳಿಗೆ ಜಮೀನನ್ನು ಬಳಸದವರಿಂದ ಜಮೀನನ್ನು ಹಿಂಪಡೆಯುವುದಾಗಿ ನಿಯಮ ರೂಪಿಸಲಾಗಿದೆ. ಜಮೀನು ಪಡೆದುಕೊಂಡ ಉದ್ದೇಶಕ್ಕೆ ಬಳಸುವವರಿಗೆ ಜಮೀನಿನ ಮೌಲ್ಯ ಪಡೆದು ಅವರ ಹೆಸರಿಗೆ ವರ್ಗಾಯಿಸಲು ಅವಕಾಶ ನೀಡಲಾಗಿದೆ.
ಇದರಿಂದ ಪದೇ ಪದೇ ನವೀಕರಣಗೊಳಿಸುವ ಕೆಲಸ ಕಡಿಮೆಯಾಗುತ್ತದೆ. ಹಾಗಾಗಿ ಅವರಿಗೆ ಶಾಶ್ವತವಾಗಿ ನೀಡುವ ಯೋಜನೆ ರೂಪಿಸಲಾಗಿದೆ. ಉದ್ದೇಶಿತ ಕಾರ್ಯಗಳಿಗೆ ಬಳಸದೆ ಇದ್ದರೆ ಮರು ಪಡೆಯುವ ಲೀಸ್‌ ಅಗ್ರಿಮೆಂಟ್‌ ಅನ್ನು ಹಾಗೆಯೇ ಉಳಿಸಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…

ನಾಳೆಯಿಂದ ರೈಲು ಸಂಚಾರ ಆರಂಭ

ಲಾಕ್ ಡೌನ್ ಹಿನ್ನೆಲೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಇದೀಗ ನಾಳೆಯಿಂದ ರೈಲು ಸಂಚಾರ ಆರಂಭವಾಗಲಿದ್ದು, ರೈಲು ಸಂಚಾರಕ್ಕೆ ರೈಲ್ವೇ ಇಲಾಖೆ ಕೆಲವು ಷರತ್ತುಗಳನ್ನು ವಿಧಿಸಿde.