ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಸಂಸ್ಥೆ, ವೈದ್ಯಕೀಯ, ಕೈಗಾರಿಕೆ ಹಾಗೂ ವ್ಯವಸಾಯ ಮೊದಲಾದ ಚಟುವಟಿಕೆಗಳು ನಡೆಸಲು ಖಾಸಗಿಯವರಿಗೆ ನೀಡಿರುವ ಸರ್ಕಾರಿ ಜಮೀನನ್ನು ಶಾಶ್ವತವಾಗಿ ಅವರಿಗೆ ಮಾರಾಟ ಮಾಡುವ ನಿರ್ಧಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಖಾಸಗಿ ಕಂಪನಿಗಳಿಗೆ, ವ್ಯಕ್ತಿಗಳಿಗೆ ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಂಜೂರು ಮಾಡಲಾದ ಉದ್ದೇಶಗಳಿಗೆ ಜಮೀನನ್ನು ಬಳಸದವರಿಂದ ಜಮೀನನ್ನು ಹಿಂಪಡೆಯುವುದಾಗಿ ನಿಯಮ ರೂಪಿಸಲಾಗಿದೆ. ಜಮೀನು ಪಡೆದುಕೊಂಡ ಉದ್ದೇಶಕ್ಕೆ ಬಳಸುವವರಿಗೆ ಜಮೀನಿನ ಮೌಲ್ಯ ಪಡೆದು ಅವರ ಹೆಸರಿಗೆ ವರ್ಗಾಯಿಸಲು ಅವಕಾಶ ನೀಡಲಾಗಿದೆ.
ಇದರಿಂದ ಪದೇ ಪದೇ ನವೀಕರಣಗೊಳಿಸುವ ಕೆಲಸ ಕಡಿಮೆಯಾಗುತ್ತದೆ. ಹಾಗಾಗಿ ಅವರಿಗೆ ಶಾಶ್ವತವಾಗಿ ನೀಡುವ ಯೋಜನೆ ರೂಪಿಸಲಾಗಿದೆ. ಉದ್ದೇಶಿತ ಕಾರ್ಯಗಳಿಗೆ ಬಳಸದೆ ಇದ್ದರೆ ಮರು ಪಡೆಯುವ ಲೀಸ್‌ ಅಗ್ರಿಮೆಂಟ್‌ ಅನ್ನು ಹಾಗೆಯೇ ಉಳಿಸಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಶೃಂಗಸಭೆಯಲ್ಲಿ ಭಾರತ ಸೇರಿಸುವಂತೆ ಟ್ರಂಪ್ ಮನವಿ

ಅಮೇರಿಕಾ: ಮುಂದಿನ ತಿಂಗಳು ನಡೆಯಬೇಕಿದ್ದ ಜಿ7 (ಗ್ರೂಪ್ ಆಫ್‌ 7) ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್…

ಛಬ್ಬಿ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಕರವೇ ಮನವಿ

ಶಿರಹಟ್ಟಿ: ತಾಲೂಕಿನ ಛಬ್ಬಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ರಕ್ಷಣಾ ವೇದಿಕೆ ತಾಲೂಕು ಘಟಕ…

ಕುಕನೂರಿನಲ್ಲಿ 23ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು.

ಕೊಪ್ಪಳ: ಜಿಲ್ಲೆಯ ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ. ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಘಟಕದಿಂದ ಕುಕನೂರು…