ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಸಂಸ್ಥೆ, ವೈದ್ಯಕೀಯ, ಕೈಗಾರಿಕೆ ಹಾಗೂ ವ್ಯವಸಾಯ ಮೊದಲಾದ ಚಟುವಟಿಕೆಗಳು ನಡೆಸಲು ಖಾಸಗಿಯವರಿಗೆ ನೀಡಿರುವ ಸರ್ಕಾರಿ ಜಮೀನನ್ನು ಶಾಶ್ವತವಾಗಿ ಅವರಿಗೆ ಮಾರಾಟ ಮಾಡುವ ನಿರ್ಧಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಖಾಸಗಿ ಕಂಪನಿಗಳಿಗೆ, ವ್ಯಕ್ತಿಗಳಿಗೆ ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಂಜೂರು ಮಾಡಲಾದ ಉದ್ದೇಶಗಳಿಗೆ ಜಮೀನನ್ನು ಬಳಸದವರಿಂದ ಜಮೀನನ್ನು ಹಿಂಪಡೆಯುವುದಾಗಿ ನಿಯಮ ರೂಪಿಸಲಾಗಿದೆ. ಜಮೀನು ಪಡೆದುಕೊಂಡ ಉದ್ದೇಶಕ್ಕೆ ಬಳಸುವವರಿಗೆ ಜಮೀನಿನ ಮೌಲ್ಯ ಪಡೆದು ಅವರ ಹೆಸರಿಗೆ ವರ್ಗಾಯಿಸಲು ಅವಕಾಶ ನೀಡಲಾಗಿದೆ.
ಇದರಿಂದ ಪದೇ ಪದೇ ನವೀಕರಣಗೊಳಿಸುವ ಕೆಲಸ ಕಡಿಮೆಯಾಗುತ್ತದೆ. ಹಾಗಾಗಿ ಅವರಿಗೆ ಶಾಶ್ವತವಾಗಿ ನೀಡುವ ಯೋಜನೆ ರೂಪಿಸಲಾಗಿದೆ. ಉದ್ದೇಶಿತ ಕಾರ್ಯಗಳಿಗೆ ಬಳಸದೆ ಇದ್ದರೆ ಮರು ಪಡೆಯುವ ಲೀಸ್‌ ಅಗ್ರಿಮೆಂಟ್‌ ಅನ್ನು ಹಾಗೆಯೇ ಉಳಿಸಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಹತ್ಯೆ!

ಮಂಡ್ಯ : ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗದಗನಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢ

ಗದಗ: ಈಗಾಗಲೇ ಗದಗ ಜಿಲ್ಲೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದರಿಂದ…

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ಪದ್ಮಶ್ರೀ ಇಬ್ರಾಹಿಂ ಸುತಾರ್ ಇನ್ನಿಲ್ಲ

ಮಹಾಲಿಂಗಪುರ:ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ…