ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಸಂಸ್ಥೆ, ವೈದ್ಯಕೀಯ, ಕೈಗಾರಿಕೆ ಹಾಗೂ ವ್ಯವಸಾಯ ಮೊದಲಾದ ಚಟುವಟಿಕೆಗಳು ನಡೆಸಲು ಖಾಸಗಿಯವರಿಗೆ ನೀಡಿರುವ ಸರ್ಕಾರಿ ಜಮೀನನ್ನು ಶಾಶ್ವತವಾಗಿ ಅವರಿಗೆ ಮಾರಾಟ ಮಾಡುವ ನಿರ್ಧಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಖಾಸಗಿ ಕಂಪನಿಗಳಿಗೆ, ವ್ಯಕ್ತಿಗಳಿಗೆ ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಂಜೂರು ಮಾಡಲಾದ ಉದ್ದೇಶಗಳಿಗೆ ಜಮೀನನ್ನು ಬಳಸದವರಿಂದ ಜಮೀನನ್ನು ಹಿಂಪಡೆಯುವುದಾಗಿ ನಿಯಮ ರೂಪಿಸಲಾಗಿದೆ. ಜಮೀನು ಪಡೆದುಕೊಂಡ ಉದ್ದೇಶಕ್ಕೆ ಬಳಸುವವರಿಗೆ ಜಮೀನಿನ ಮೌಲ್ಯ ಪಡೆದು ಅವರ ಹೆಸರಿಗೆ ವರ್ಗಾಯಿಸಲು ಅವಕಾಶ ನೀಡಲಾಗಿದೆ.
ಇದರಿಂದ ಪದೇ ಪದೇ ನವೀಕರಣಗೊಳಿಸುವ ಕೆಲಸ ಕಡಿಮೆಯಾಗುತ್ತದೆ. ಹಾಗಾಗಿ ಅವರಿಗೆ ಶಾಶ್ವತವಾಗಿ ನೀಡುವ ಯೋಜನೆ ರೂಪಿಸಲಾಗಿದೆ. ಉದ್ದೇಶಿತ ಕಾರ್ಯಗಳಿಗೆ ಬಳಸದೆ ಇದ್ದರೆ ಮರು ಪಡೆಯುವ ಲೀಸ್‌ ಅಗ್ರಿಮೆಂಟ್‌ ಅನ್ನು ಹಾಗೆಯೇ ಉಳಿಸಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಗಾರ್ಡನ್ ದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟನೆ

ಆಲಮಟ್ಟಿ : ಇಲ್ಲಿನ ಬಹು ವೈವಿಧ್ಯಮಯ ನಾನಾ ಬಗೆಯ ಉದ್ಯಾನವನಗಳ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ…

ಗದಗ ಜಿಲ್ಲೆಯಲ್ಲಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಿದರೆ ಪರವಾನಿಗೆ ರದ್ದಾಗುತ್ತಂತೆ!

ರಸಗೊಬ್ಬರ ದಾಸ್ತಾನನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರಸಗೊಬ್ಬರ ಪರವಾನಿಗೆಯನ್ನು ರದ್ದುಗೊಳಿಸಿ, ಕಾನೂನು ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಮಾರಾಟಗಾರರು ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರೈತ ಬಾಂಧವರು ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಈ ಕೆಳಗಿನ ದೂರವಾಣಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಸಿದ್ದರಾಮಯ್ಯ

ಜ್ವರ ಕಾನಿಸಿಕೊಂಡ ಹಿನ್ನಲೆಯಲ್ಲಿ ಈಚೆಗೆ ಮಣಿಪಾಲ ಆಸ್ಪತ್ರೆಗೆ ಧಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…