ಬೆಂಗಳೂರು : ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿದೆ. ನಿನ್ನೆ ಒಂದೇ ದಿನ ಗರಿಷ್ಠ ಸೋಂಕಿತರು ದೇಶದಲ್ಲಿ ಪತ್ತೆಯಾಗಿದ್ದಾರೆ. 

ನಿನ್ನೆ ಒಂದೇ ದಿನ ದೇಶದಲ್ಲಿ 16,868 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 4.72 ಲಕ್ಷಕ್ಕೆ ಏರಿಕೆ ಕಂಡಿದೆ. ಈ ಪೈಕಿ 2,71,688 ಜನ ಗುಣಮುಖರಾಗಿದ್ದಾರೆ. 14,907 ಜನ ಸಾವನ್ನಪ್ಪಿದ್ದಾರೆ. ಸೋಂಕಿತರ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿದೆ.

ಇನ್ನು ವಿಶ್ವದಲ್ಲಿ ಈ ಮಹಾಮಾರಿ ಇಲ್ಲಿಯವರೆಗೆ 4.84 ಲಕ್ಷ ಜನರನ್ನು ಬಲಿ ಪಡೆದಿದೆ. 95.27 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 51.75 ಲಕ್ಷ ಜನರು ಆರೋಗ್ಯವಾಗಿದ್ದಾರೆ. ಅಮೆರಿಕದಲ್ಲಿ ಅತೀ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 24.62 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 1.24 ಲಕ್ಷ ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಅಮೆರಿಕ ಮೊದಲನೇ ಸ್ಠಾನದಲ್ಲಿದೆ.

ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 11.92 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣ ಬೆಳಕಿಗೆ ಬಂದಿವೆ. ಇಲ್ಲಿ 53 ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಮೃತಪ ಪಟ್ಟಿಯಲ್ಲಿ ಕೂಡ ಬ್ರೆಜಿಲ್ 2ನೇ ಸ್ಥಾನದಲ್ಲಿದೆ. ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. 6.06 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿ 8500ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 

ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ 3.06 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 43 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ

ನೇಣಿಗೆ ಕೊರಳೊಡ್ಡಿದ ಕಾರ್ಪೊರೇಟರ್ ಪತ್ನಿ!

ಬೆಂಗಳೂರು : ಇಲ್ಲಿಯ ಬಸವನಪುರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಅಂಬೇಡ್ಕರ್ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ :ಮಾರುತಿ ಕಟ್ಟೀಮನಿ

ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಹಿತ್ಯ ಸಂಘ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಹಾಗು ಪ್ರಬಂಧ ಸ್ಪರ್ಧೆಆಯೋಜಿಸಲಾಗಿತ್ತು.

ರಾಜ್ಯದಲ್ಲಿಂದು ತಿವ್ರಗೊಂಡ ಸೋಂಕು, ಸಾವು!: 2738 ಪಾಸಿಟಿವ್, 73 ಸಾವು

ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.