ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ ಒಳ್ಳೆಯ ಚಿತ್ರ ಸಿಕ್ಕರೆ ಕನ್ನಡದಲ್ಲಿ ನಟಿಸುತ್ತೇನೆ ಎಂದು ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ನೃತ್ಯ ಕೌಶಲ್ಯ, ವ್ಯಾಯಾಮ ಅಥವಾ ಇತರ ಆಸಕ್ತಿದಾಯಕ ಚಟುವಟಿಕೆಗಳಿಂದ ಸಂಚಲನ ಮೂಡಿಸುತ್ತಿದ್ದಾರೆ. ವರ್ಕ್ ಹಾಗೂ ಜಿಮ್ ಅನ್ನು ತಪ್ಪಿಸಿಕೊಳ್ಳುತ್ತಿದ್ದೇನೆ. ಆದರೆ ಡ್ಯಾನ್ಸ್ ಮಾತ್ರ ಎಂದಿಗೂ ನಿಲ್ಲಿಸಿಲ್ಲ. ಹೊಸ ಹೊಸ ಬಗೆಯ ಪ್ರಕಾರಗಳಿಗೆ ತನ್ನನ್ನು ತೆರೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ನಾನು ಬರೆಯುವುದನ್ನು ಹಾಗೂ ಅಡುಗೆ ಮಾಡುವುದನ್ನು ಕಲಿಯುತ್ತಿದ್ದೇನೆ. ಆಕ್ಟಿಂಗ್ ಕ್ಲಾಸ್ ತೆಗೆದುಕೊಂಡಿದ್ದೆ. ಅಲ್ಲದೇ, ಹೆತ್ತವರೊಂದಿಗೆ ಸದ್ಯ ಸಮಯ ಕಳೆಯುತ್ತಿದ್ದೇನೆ. ಇದರಿಂದ ತುಂಬಾ ಖುಷಿಯಾಗಿದೆ ಎಂದು ಅವರು ಹೇಳಿದ್ದಾರೆ. 

ವಾಚ್ ಮ್ಯಾನ್, ಮತ್ತು ಜಯಂ ರವಿ ಎದುರು ನಟಿಸಿದ ಕೋಮಲಿ ಚಿತ್ರಗಳ ಮೂಲಕ ಸಂಯುಕ್ತ ಹೆಗ್ಡೆ ಕಾಲಿವುಡ್ ನಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಕೆಲವು ಸ್ಕ್ರಿಪ್ಟ್‌ಗಳ ಓದುವಿಕೆ ನಡೆದಿದೆ. ಆದರೆ ಯಾವುದೂ ಅಂತಿಮವಾಗಿಲ್ಲ ಎಂದು ಹೇಳಿದ್ದಾರೆ. 

ಒಬ್ಬ ನಟಿಯಾಗಿ ಕೆಲಸ ಮಾಡಲು ಪ್ರಾರಂಭಿಸಿದ ಭಾಷೆಯಲ್ಲಿ ಬೆಳೆಯಲು ಇಷ್ಟಪಡುತ್ತೇನೆ. ಕನ್ನಡದ ಇತರ ನಟಿಯರಿಗಿಂತ ಹೆಚ್ಚು ಕನ್ನಡವನ್ನು ನಿರರ್ಗಳವಾಗಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಅಕ್ರಮ ಮಣ್ಣು ಲೂಟಿ ಆರೋಪ : ಶಾಸಕ ಬಂಡಿ ರಾಜಿನಾಮೆಗೆ ಒತ್ತಾಯ

ಕೆರೆಯ ಗರಸು ಮಣ್ಣನ್ನು ಅಕ್ರಮವಾಗಿ ಲೂಟಿ ಮಾಡಿದ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕಮೀಟಿ ವಕ್ತಾರ ಬಿ.ಎಸ್.ಶೀಲವಂತರ ಆಗ್ರಹಿಸಿದ್ದಾರೆ.

ಸದನಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಮಾಡಿದ ಅವಮಾನವಿದು

ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ.

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…

ಜಿಪಂ, ತಾಪಂ ಸೇರಿ ರಾಜ್ಯದಲ್ಲಿ ಎಲ್ಲ ಚುನಾವಣೆ ಮುಂದೂಡಿಕೆ

ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯಲ್ಲಿ 14 ದಿನಗಳ ಕಾಲ ಜನತಾ ಕರ್ಪ್ಯೂಗೆ ನಿರ್ಧರಿಸಿದೆ.