ಮುಂಡರಗಿ: ಈಗಾಗಲೇ ವರ್ಷ ಪೂರ್ತಿ ಓದಿ ಪರೀಕ್ಷೆಗಾಗಿ ಕಾದಿದ್ದ ಆ ವಿದ್ಯಾರ್ಥಿ ಪರೀಕ್ಷೆ ಮುಗಿಸುವ ಮುನ್ನವೇ ತನ್ನ ಬದುಕಿನ ಪರೀಕ್ಷೆ ಮುಗಿಸಿ ಫಲಿತಾಂಶ ಪಡೆದುಕೊಂಡು ಹೋಗಿದ್ದಾನೆ. ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಯ ಮೇಲೆ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಲಾರಿ ಮೂಲಕ ಬಂದ ಜವರಾಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯನ್ನೆ ಬಲಿ ಪಡೆದಿದ್ದಾನೆ. ಮದ್ಯಾಹ್ನವಷ್ಟೆ ಪರೀಕ್ಷೆ ಮುಗಿಸಿ ಮನೆಗೆ ಮರಳುವ ವೇಳೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಬಳಿ‌ ಸಂಭವಿಸಿದ ಅಪಘಾತದಲ್ಲಿ ಮೂವರು ಎಸ್.ಎಸ್.ಎಲ್ಸಿ ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರ ಸ್ಥಿತಿ ಗಂಭೀರವಾಗಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಓರ್ವ ವಿದ್ಯಾರ್ಥಿ ಸಿದ್ದಪ್ಪ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಉಳಿದಿಬ್ಬರನ್ನು ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಲಿಂಗಾಯತರನ್ನು ಮುಗಿಸಲು ಪ್ರಹ್ಲಾದ್ ಜೋಶಿ ನಮ್ಮ ವಿರುದ್ಧ ನಿಂತಿದ್ದಾರೆ – ವಿಜಯ್ ಕುಲಕರ್ಣಿ ಆರೋಪ!

ಹುಬ್ಬಳ್ಳಿ : ಯೋಗೀಶಗೌಡ ಅವರ ಕೊಲೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೊಳಪಟ್ಟಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ನಟ ಚಿರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಸಚಿವ ಸುಧಾಕರ್ ಪತ್ನಿ, ಪುತ್ರಿಗೂ ಕೊರೊನಾ ಪಾಸಿಟಿವ್..!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ…

ಗ್ರಾಪಂ ಮಾಜಿ ಅಧ್ಯಕ್ಷನ ದರ್ಪ!: ಮರಳು ಟಿಪ್ಪರ್ ನಿಧಾನವಾಗಿ ಓಡಿಸಿ ಅಂದಿದ್ದಕ್ಕೆ ಹಲ್ಲೆ ಮಾಡಿದ ಆರೋಪ

ಹೇಳೋದು ವೇದಾಂತ, ತಿನ್ನೋದು ಬದನೆಕಾಯಿ ಎನ್ನುತ್ತಾರಲ್ಲ, ಆ ರೀತಿಯ ಕಥೆಯಿದು. ಇಲ್ಲೊಬ್ಬ ವ್ಯಕ್ತಿ ಊರಿನ ಮುಖಂಡ. ಪ್ರತಿ ದಿನ ನಾಲ್ಕಾರು ಜನಕ್ಕೆ ಬುದ್ಧಿ ಹೇಳುತ್ತಿದ್ದ. ಸದ್ಯ ಈ ವ್ಯಕ್ತಿಯೇ ಕುಟುಂಬವೊಂದರ ಮೇಲೆ ದರ್ಪ ಮೆರೆದಿದ್ದಾನೆ.