ಮುಂಡರಗಿ: ಈಗಾಗಲೇ ವರ್ಷ ಪೂರ್ತಿ ಓದಿ ಪರೀಕ್ಷೆಗಾಗಿ ಕಾದಿದ್ದ ಆ ವಿದ್ಯಾರ್ಥಿ ಪರೀಕ್ಷೆ ಮುಗಿಸುವ ಮುನ್ನವೇ ತನ್ನ ಬದುಕಿನ ಪರೀಕ್ಷೆ ಮುಗಿಸಿ ಫಲಿತಾಂಶ ಪಡೆದುಕೊಂಡು ಹೋಗಿದ್ದಾನೆ. ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಯ ಮೇಲೆ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಲಾರಿ ಮೂಲಕ ಬಂದ ಜವರಾಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯನ್ನೆ ಬಲಿ ಪಡೆದಿದ್ದಾನೆ. ಮದ್ಯಾಹ್ನವಷ್ಟೆ ಪರೀಕ್ಷೆ ಮುಗಿಸಿ ಮನೆಗೆ ಮರಳುವ ವೇಳೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಬಳಿ‌ ಸಂಭವಿಸಿದ ಅಪಘಾತದಲ್ಲಿ ಮೂವರು ಎಸ್.ಎಸ್.ಎಲ್ಸಿ ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರ ಸ್ಥಿತಿ ಗಂಭೀರವಾಗಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಓರ್ವ ವಿದ್ಯಾರ್ಥಿ ಸಿದ್ದಪ್ಪ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಉಳಿದಿಬ್ಬರನ್ನು ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಡೋಣಿ ಅವಾಂತರ – ನಡುಗಡ್ಡೆಯಲ್ಲಿಯೇ ಕೈಯಲ್ಲಿ ಜೀವ ಹಿಡಿದು ನಿಂತಿರುವ ಜನ!

ವಿಜಯಪುರ : ಉತ್ತರ ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನರ ಬದುಕು ಅಕ್ಷರಶಃ ಬೀದಿಗೆ ಬಂದು ನಿಂತಿದೆ.

ಕೋವೀಡ್ ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರ ನೀಡಿ-ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಾಲೇಹೊಸೂರು: ಸೀಲ್ ಡೌನ್ ತಂದ ಸಿಟ್ಟು; ತಹಸೀಲ್ದಾರ್ಗೆ ಮಾತಿನ ಪೆಟ್ಟು!

ಗದಗ: 8 ದಿನದಿಂದ ಅಗತ್ಯ ವಸ್ತು ಸಿಗದೇ ಕಂಗಾಲಾಗಿದ್ದ ಸೀಲ್ ಡೌನ್ ಪ್ರದೇಶದ ಜನರ ಎದುರು…

ರೈತರಿಗೆ ಖಾರವಾಯ್ತು ಮೆಣಸಿನಕಾಯಿ: ಕಂಗಾಲದ ಬೆಳೆಗಾರರು

ಜಿಲ್ಲೆಯಲ್ಲಿ ಮುಖ್ಯ ಬೆಳೆಯೇ ಮೆಣಸಿನ ಕಾಯಿ ಬೆಳೆ. ಆದರೆ ಮೆಣಸಿನಕಾಯಿ ಬೆಳೆದ ರೈತರಿಗೆ ಈ ಭಾರಿ ಮೆಣಸಿನಕಾಯಿ ಖಾರವಾಗಿ ಮಾರ್ಪಟ್ಟಿದೆ. ಈ ಕಾರಣದಿಂದ ಬೆಲೆ ಇಲ್ಲದ ಕಾರಣ ಬೆಳೆದ ಬೆಳೆಯನ್ನು ಅನ್ನದಾತ ನಾಶಪಡಿಸುತ್ತಿದ್ದಾನೆ.