ತೋಟಗಾರಿಕೆ ಬೆಳೆಗಳಿಗೆ ವಿಮಾ ಕಂತು ಪಾವತಿಗೆ ಜೂನ್ 30 ಕೊನೆಯ ದಿನ

ಗದಗ: ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ದಾಳಿಂಬೆ ಮತ್ತು ಪಪ್ಪಾಯ (ಪರಂಗಿ)  ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ಬಜಾಜ್ ಅಲೆನ್ಸ್ ಇನ್ಸೂರೆನ್ಸ ಕಂಪನಿ ವಿಮೆ ನೀಡಲಿದೆ.
ದಾಳಿಂಬೆ ಮತ್ತು ಪಪ್ಪಾಯ (ಪರಂಗಿ) ಬೆಳೆಗೆ ವಿಮೆ ಕಂತು ಪಾವತಿಗೆ ಜೂನ್ 30 ಕೊನೆಯ ದಿನವಾಗಿದೆ. ರೈತರು ಸ್ವಯಂ ದೃಢೀಕರಣ, ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ ಕಾರ್ಡ ಸೇರಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಅಥವಾ ತೋಟಗಾರಿಕೆ ಮಾಹಿತಿ ಹಾಗೂ ಸಲಹಾ ಕೇಂದ್ರ ಗದಗಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದೆಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿರುತ್ತಾರೆ.

Exit mobile version